ಮಾವೋವಾದಿ ದಾಳಿ: ಗಾಯಾಳು ಯೋಧರನ್ನು ಭೇಟಿಯಾದ ರಾಜನಾಥ್ ಸಿಂಗ್
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜನಾಥ್ ಸಿಂಗ್, ಗಂಭೀರವಾಗಿ ಗಾಯಗೊಂಡು ಇಲ್ಲಿನ ನಾರಯಣ ಅಸ್ಪತ್ರೆಯಲ್ಲಿ ದಾಖಲಾಗಿರುವ ಯೋಧರನ್ನು ಭೇಟಿಯಾಗಿ, ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ.
ಸುಕ್ಮಾ, ಛತ್ತೀಸ್’ಗಢ (ಮಾ.11): ಛತ್ತೀಸ್’ಗಢದ ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳ ದಾಳಿಯಲ್ಲಿ ಗಾಯಗೊಂಡಿರುವ ಸಿಆರ್’ಪಿಎಫ್ ಯೋಧರನ್ನು ಕೇಂದ್ರ ಗೃಹಮಂತ್ರಿ ಭೇಟಿ ಮಾಡಿದ್ದಾರೆ.
ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ರಾಜನಾಥ್ ಸಿಂಗ್, ಗಂಭೀರವಾಗಿ ಗಾಯಗೊಂಡು ಇಲ್ಲಿನ ನಾರಯಣ ಅಸ್ಪತ್ರೆಯಲ್ಲಿ ದಾಖಲಾಗಿರುವ ಯೋಧರನ್ನು ಭೇಟಿಯಾಗಿ, ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ.
ಮಾವೋವಾದಿಗಳ ದಾಳಿಗೆ 12 ಮಂದಿ ಯೋಧರು ಮೃತಪಟ್ಟಿದ್ದಾರೆ. ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್, ಹುತಾತ್ಮ ಯೋಧರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.