ರಾಮಾಯಣ ಸೃಷ್ಟಿಕರ್ತ ವಾಲ್ಮೀಕಿ ಬಗ್ಗೆ ಅವಹೇಳನಕಾರಿಯಾಗಿ ಖಾಸಗಿ ಚಾನೆಲ್ ವೊಂದರಲ್ಲಿ ಹೇಳಿಕೆ ನೀಡಿ ವಿವಾದವನ್ನು ಸೃಷ್ಟಿ ಮಾಡಿದ್ದ ನಟಿ ರಾಖಿ ಸಾವಂತ್ ರನ್ನು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ.

ನವದೆಹಲಿ (ಏ.04): ರಾಮಾಯಣ ಸೃಷ್ಟಿಕರ್ತ ವಾಲ್ಮೀಕಿ ಬಗ್ಗೆ ಅವಹೇಳನಕಾರಿಯಾಗಿ ಖಾಸಗಿ ಚಾನೆಲ್ ವೊಂದರಲ್ಲಿ ಹೇಳಿಕೆ ನೀಡಿ ವಿವಾದವನ್ನು ಸೃಷ್ಟಿ ಮಾಡಿದ್ದ ನಟಿ ರಾಖಿ ಸಾವಂತ್ ರನ್ನು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಕ್ಷೇಪಾರ್ಹವಾಗಿ ಹೇಳಿಕೆ ನೀಡುವುದರ ಮೂಲಕ ವಾಲ್ಮೀಕಿ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿರುವುದಕ್ಕೆ ಆ ಸಮುದಾಯದವರು ದೂರು ನೀಡಿದ್ದರು. ಅದನ್ನು ಆಧರಿಸಿ ಲೂಧಿಯಾನ ಸ್ಥಳೀಯ ನ್ಯಾಯಾಲಯ ರಾಖಿ ಸಾವಂತ್ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದ್ದು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ.