ಆಜಂ ಖಾನ್ ಅವರನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದ ರಮಾದೇವಿ| ಆಜಂ ಖಾನ್ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದ ಬಿಜೆಪಿ ಸಂಸದೆ|  ‘ಆಜಂ ಖಾನ್ ಹೇಳೀಕೆ ಇಡೀ ದೇಶದ ಮಹಿಳೆಗೆ ಮಾಡಿದ ಅವಮಾನ’| 

ನವದೆಹಲಿ(ಜು.27): ಸದನದಲ್ಲಿ ತಮ್ಮ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಅವರನ್ನು ತಾವು ಕ್ಷಮಿಸುವುದಿಲ್ಲ ಎಂದು ಬಿಜೆಪಿ ಸಂಸದೆ ರಮಾದೇವಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಜಂ ಅವರಂತಹ ವ್ಯಕ್ತಿಗಳನ್ನು ಎದುರಿಸುವ ಶಕ್ತಿ ತಮಗಿದ್ದು, ಅವರನ್ನು ಯಾವ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ರಮಾದೇವಿ ಸ್ಪಷ್ಟಪಡಿಸಿದ್ದಾರೆ.

ಆಜಂ ಖಾನ್ ತಮ್ಮ ಕುರಿತು ನೀಡಿದ ಹೇಳಿಕೆ ಇಡೀ ದೇಶದ ಮಹಿಳೆಗೆ ಮಾಡಿದ ಅವಮಾನವಾಗಿದ್ದು, ಇಂತಹ ವ್ಯಕ್ತಿಗಳನ್ನು ಧೈರ್ಯವಾಗಿ ಎದುರಿಸುವ ಶಕ್ತಿ ಇದೆ ಎಂದು ಹೇಳಿದ್ದಾರೆ.