Asianet Suvarna News Asianet Suvarna News

ದಲಿತರೆಲ್ಲಾ ಹಿಂದೂ ಧರ್ಮ ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸಿ : ಕೇಂದ್ರ ಸಚಿವರ ಕರೆ

ಹಿಂದು ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರವಾಗಬೇಕಾಗುತ್ತದೆ ಎಂಬ ಬಿಎಸ್ಪಿ ನಾಯಕಿ ಮಾಯಾವತಿ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ, ದಲಿತರು ಹಿಂದು ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಿ ಎಂದು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕರೆ ನೀಡಿದ್ದಾರೆ.

Ramdas Athawale asks Dalits to turn to Buddhism

ಮುಂಬೈ(ಡಿ.14): ಹಿಂದು ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರವಾಗಬೇಕಾಗುತ್ತದೆ ಎಂಬ ಬಿಎಸ್ಪಿ ನಾಯಕಿ ಮಾಯಾವತಿ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ, ದಲಿತರು ಹಿಂದು ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮಕ್ಕೆ ಮತಾಂತರವಾಗಿ ಎಂದು ಕೇಂದ್ರ ಸಚಿವ ರಾಮದಾಸ್ ಅಠವಾಳೆ ಕರೆ ನೀಡಿದ್ದಾರೆ.

ಈ ಬಗ್ಗೆ ಬುಧವಾರ ಮಾತನಾಡಿದ ಅವರು, `ದಲಿತರಿಗೆ ಹಿಂದು ಧರ್ಮದಲ್ಲಿ ನ್ಯಾಯ ಸಿಗುವುದಿಲ್ಲ ಎಂಬುದನ್ನು ಅರ್ಥೈಸಿಕೊಂಡ ಅಂಬೇಡ್ಕರ್ ಬೌದ್ಧ ಧರ್ಮಕ್ಕೆ ಸೇರಿಕೊಂಡರು.

ಅದೇ ರೀತಿ ನಾನು ಸಹ ಬೌದ್ಧ ಧರ್ಮಕ್ಕೆ ಸೇರ್ಪಡೆಯಾಗಿದ್ದೇನೆ. ಲಕ್ಷಾಂತರ ದಲಿತರು ಸಹ ಇದೇ ಮಾರ್ಗ ಅನುಸರಿಸಬೇಕು' ಎಂದು ಹೇಳಿದ್ದಾರೆ.

Follow Us:
Download App:
  • android
  • ios