ವಿದ್ಯಾರ್ಥಿ ವಿಶ್ವಾಸ್ ಈಜು ಬಾರದೆ ಮುಳುಗುತ್ತಿದ್ದ. ಈ ಸಂದರ್ಭದಲ್ಲಿ ಆತನನ್ನು ರಕ್ಷಿಸುವ ಬದಲು ಉಳಿದ ಸ್ನೇಹಿತರು ಸೆಲ್ಫಿ ತೆಗೆದುಕೊಳ್ಳುವಲ್ಲಿ ನಿರತರಾಗಿದ್ದರು

ಕನಕಪುರ(ಸೆ.25): ಸೆಲ್ಫಿ ತೆಗೆದುಕೊಳ್ಳುವ ಸಂಭ್ರಮದಲ್ಲಿ ನೀರಿನಲ್ಲಿ ಮುಳುಗುತ್ತಿರುವ ಸ್ನೇಹಿತನನ್ನು ಮರೆತ ಕಾರಣ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ರಾಮಗೊಂಡ್ಲು ಬಳಿ ನಡೆದಿದೆ.

Add Asianetnews Kannada as a Preferred SourcegooglePreferred

ಜಯನಗರ ನ್ಯಾಷನಲ್ ಕಾಲೇಜಿನಿಂದ 21 ವಿದ್ಯಾರ್ಥಿಗಳ ತಂಡ ರಾಮಗೊಂಡ್ಲು ಬಳಿ ಟ್ರಕ್ಕಿಂಗ್'ಗೆ ತೆರಳಿದ್ದಾರೆ. ಅಲ್ಲೇ ಸ್ಥಳೀಯ ಈಜುಕೊಳದಲ್ಲಿ ಎಲ್ಲ ಸ್ನೇಹಿತರು ಮೋಜು ಮಾಡುತ್ತಿದ್ದರು. ಈ ಸಮಯದಲ್ಲಿ ವಿದ್ಯಾರ್ಥಿ ವಿಶ್ವಾಸ್ ಈಜು ಬಾರದೆ ಮುಳುಗುತ್ತಿದ್ದ. ಈ ಸಂದರ್ಭದಲ್ಲಿ ಆತನನ್ನು ರಕ್ಷಿಸುವ ಬದಲು ಉಳಿದ ಸ್ನೇಹಿತರು ಸೆಲ್ಫಿ ತೆಗೆದುಕೊಳ್ಳುವಲ್ಲಿ ನಿರತರಾಗಿದ್ದರು. ಕೊನೆಗೂ ಈತನನ್ನು ಉಳಿಸಲು ಯಾರು ಮುಂದಾಗದ ಕಾರಣ ವಿಶ್ವಾಸ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ದೃಶ್ಯ ಫೋಟೊದಲ್ಲಿ ಸೆರೆಯಾಗಿದೆ. ಪುತ್ರನನ್ನು ಕಳೆದುಕೊಂಡಿರುವ ವಿಶ್ವಾಸ್'ನ ಪೋಷಕರು ತಮ್ಮ ಮಗನ ಸಾವಿಗೆ ಕಾಲೇಜ್ ಆಡಳಿತ ಮಂಡಳಿ ಕಾರಣವೆಂದು ಆರೋಪಿಸಿ ಕಾಲೇಜು ಮುಂಭಾಗ ಶವವಿಟ್ಟು ಸಂಬಂಧಿಕರ ಪ್ರತಿಭಟನೆ ನಡೆಸುತ್ತಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.