ಎನ್’ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ನಾಳೆಯಿಂದ  ದಕ್ಷಿಣ ಭಾರತದಲ್ಲಿ ಪ್ರಚಾರ ಆರಂಭಿಸಲಿದ್ದಾರೆ.  ಈ ಸಂದರ್ಭದಲ್ಲಿ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ  ಕೋರಿ ವಿವಿಧ ಪಕ್ಷಗಳ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಿಗೆ ಭೇಟಿ ನೀಡಲಿರುವ ಬಿಹಾರ ಮಾಜಿ ರಾಜ್ಯಪಾಲ ಕೋವಿಂದ್, ವಿರೋಧ ಪಕ್ಷಗಳ ಸಂಸದರು ಮತ್ತು ಶಾಸಕರನ್ನು ಭೇಟಿ ಮಾಡಿ ಮತ ಯಾಚನೆ ಮಾಡಲಿದ್ದಾರೆ.

ನವದೆಹಲಿ (ಜೂ.30): ಎನ್’ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮನಾಥ್ ಕೋವಿಂದ್ ನಾಳೆಯಿಂದ ದಕ್ಷಿಣ ಭಾರತದಲ್ಲಿ ಪ್ರಚಾರ ಆರಂಭಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಕೋರಿ ವಿವಿಧ ಪಕ್ಷಗಳ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಿಗೆ ಭೇಟಿ ನೀಡಲಿರುವ ಬಿಹಾರ ಮಾಜಿ ರಾಜ್ಯಪಾಲ ಕೋವಿಂದ್, ವಿರೋಧ ಪಕ್ಷಗಳ ಸಂಸದರು ಮತ್ತು ಶಾಸಕರನ್ನು ಭೇಟಿ ಮಾಡಿ ಮತ ಯಾಚನೆ ಮಾಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜು.05 ರಂದು ಕರ್ನಾಟಕಕ್ಕೆ ಆಗಮಿಸಲಿರುವ ರಾಮನಾಥ್ ಕೋವಿಂದ್, ಇಲ್ಲಿನ ಜನಪ್ರತಿನಿಧಿಗಳ ಸಹಕಾರ ಕೋರಲಿದ್ದಾರೆ. ನಾಳೆ ತಮಿಳುನಾಡು, ಜು.04 ರಂದು ತೆಲಂಗಾಣ ರಾಜ್ಯಗಳಿಗೆ ತೆರಳಲಿದ್ದು ಅಲ್ಲಿನ ಆಡಳಿತ ಮತ್ತು ವಿಪಕ್ಷಗಳ ಜನಪ್ರತಿನಿಧಿಗಳ ಜತೆ ಸಮಾಲೋಚಿಸಿ ಮತಯಾಚನೆ ಮಾಡಲಿದ್ದಾರೆ.