ರಂಗಾಯಣ ರಘು ರಾಜಕೀಯಕ್ಕೆ ಪ್ರವೇಶ
ಹಾಸ್ಯನಟ ರಂಗಾಯಣ ರಘು ಚುನಾವಣಾ ಕಣಕ್ಕಿಳಿಯಲು ಗಂಭೀರ ಚಿಂತನೆ ನಡೆಸಿದ್ದಾರೆ. ಜೆಡಿಎಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಲು ರಂಗಾಯಣ ರಘು ಚಿಂತನೆ ನಡೆಸಿದ್ದಾರೆ.
ಬೆಂಗಳೂರು (ನ.26): ಹಾಸ್ಯನಟ ರಂಗಾಯಣ ರಘು ಚುನಾವಣಾ ಕಣಕ್ಕಿಳಿಯಲು ಗಂಭೀರ ಚಿಂತನೆ ನಡೆಸಿದ್ದಾರೆ. ಜೆಡಿಎಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಲು ರಂಗಾಯಣ ರಘು ಚಿಂತನೆ ನಡೆಸಿದ್ದಾರೆ.
ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕಳೆದ ಚುನಾವಣೆಯಲ್ಲೇ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಂಗಾಯಣ ರಘು ಈ ಬಾರಿ ಜೆಡಿಎಸ್ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಜತೆ ಚರ್ಚೆ ನಡೆಸಿದ್ದಾರೆ.