Asianet Suvarna News Asianet Suvarna News

ಅನಾರೋಗ್ಯ ಹಿನ್ನಲೆ: ವಿಕ್ಟೋರಿಯಾ ಆಸ್ಪತ್ರೆಗೆ ರವಿ ಬೆಳಗೆರೆ ಶಿಫ್ಟ್

ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಫಾರಿ ನೀಡಿದ್ದ ಕಾರಣಕ್ಕಾಗಿ ಬೆಳಗೆರೆಯನ್ನು ಬಂಧಿಸಿ ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿತ್ತು.

Ravi Belagere shift to Victoria hospital

ಬೆಂಗಳೂರು(ಡಿ.12): ಅನಾರೋಗ್ಯದ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಯ್ ಬೆಂಗಳೂರು ವಾರಪತ್ರಿಕೆಯ ಸಂಪಾದಕ ರವಿ ಬೆಳಗೆರೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಫಾರಿ ನೀಡಿದ್ದ ಕಾರಣಕ್ಕಾಗಿ ಬೆಳಗೆರೆಯನ್ನು ಬಂಧಿಸಿ ನ್ಯಾಯಾಂಗ ಬಂಧನದ ವಶಕ್ಕೆ ನೀಡಲಾಗಿತ್ತು. ಇಂದು ಬೆಳಗ್ಗೆಯಿಂದಲೂ ಬೆಳಗೆರೆ ಆರೋಗ್ಯದಲ್ಲಿ ಏರುಪೇರಾಗಿತ್ತು. ರಕ್ತದೊತ್ತಡ ಹೆಚ್ಚಾದ ಕಾರಣ ಪರಪ್ಪನ ಅಗ್ರಹಾರದ ಜೈಲು ಅಧಿಕಾರಿಗಳು ಆಸ್ಪತ್ರೆಗೆ ಸೇರಿಸಲು ತೀರ್ಮಾನಿಸಿದ್ದಾರೆ.

Follow Us:
Download App:
  • android
  • ios