Asianet Suvarna News Asianet Suvarna News

ನನ್ನ ಇನ್ನೊಬ್ಬ ಮಗನನ್ನು ದೇಶಕ್ಕೆ ಅರ್ಪಿಸಲು ಸಿದ್ಧ : ಹುತಾತ್ಮ ಯೋಧನ ತಂದೆ

ಪುಲ್ವಾಮದಲ್ಲಿ ನಡೆದ ಪೈಶಾಚಿಕ ಉಗ್ರರ ದಾಳಿಯಲ್ಲಿ 42 ಯೊಧರು ಹುತಾತ್ಮರಾಗಿದ್ದು, ಇದರಲ್ಲಿ ಓರ್ವರಾದ ಬಿಹಾರದ ಯೋಧರೋರ್ವರ ತಂದೆ ಮನಮಿಡಿಯುವ ಸಂದೇಶವೊಂದನ್ನು ನೀಡಿದ್ದಾರೆ. 

Ready To Sacrifice Other Son Says Father Of Killed Pulwama Jawan
Author
Bengaluru, First Published Feb 15, 2019, 12:39 PM IST

ನವದೆಹಲಿ : ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ ಹುತಾತ್ಮರಾದ ಯೋಧರೋರ್ವರ ತಂದೆ ದೇಶಕ್ಕಾಗಿ ಮನ ಮಿಡಿಯುವ ಸಂದೇಶವೊಂದನ್ನು ನೀಡಿದ್ದಾರೆ. 

ದೇಶಕ್ಕಾಗಿ ಈಗ ತಮ್ಮ ಓರ್ವ ಪುತ್ರನನ್ನು ಕಳೆದುಕೊಂಡಿದ್ದು,  ತಮ್ಮ ಇನ್ನೋರ್ವ ಪುತ್ರನ ಪ್ರಾಣವನ್ನು ನೀಡಲು ಸಿದ್ಧವಿದ್ದೇನೆ. ಈ ಮೂಲಕ  ಪಾಕಿಸ್ತಾನದ ಪೈಶಾಚಿಕ ಕೃತ್ಯಕ್ಕೆ ಸೂಕ್ತ ಉತ್ತರ ನೀಡಲೇಬೇಕು ಎಂದಿದ್ದಾರೆ. 

ವಿಡಿಯೋ ಬಿಡುಗಡೆ ಆಗುವ ವೇಳೆಗೆ ನಾನು ಸ್ವರ್ಗದಲ್ಲಿರುತ್ತೇನೆ ಎಂದಿದ್ದ ಪಾತಕಿ

ಒಟ್ಟು 42 ಯೋಧರು ಹುತಾತ್ಮರಾಗಿದ್ದು, ಇವರಲ್ಲಿ ಬಿಹಾರ ಮೂಲದ ಭಾಗಲ್ಪುರ್ ಮೂಲದ ರತನ್ ಠಾಕೂರ್ ಕೂಡ ಓರ್ವರು. 

ದೇಶ ಸೇವೆಗೆ ತಮ್ಮ ಪುತ್ರನನ್ನು ಅರ್ಪಿಸಿದ ಈ ತಂದೆಯ ಮಾತು  ಕಣ್ಣಲ್ಲಿ ನೀರು ತರಿಸಿದ್ದು,  ಭಾರತ ಮಾತೆಗೆ ಸೇವೆ ಸಲ್ಲಿಸಲು ಇನ್ನೊಬ್ಬ ಮಗನನ್ನು ತಾವು ಕಳುಹಿಸುವುದಾಗಿ ದುಃಖದ ನಡುವೆಯೂ ಮನಮಿಡಿಯುವ ಸಂದೇಶ ನೀಡಿದ್ದಾರೆ. 

ಹಲವು ದಿನಗಳ ಹಿಂದೆಯೇ ಗುಪ್ತಚರ ಸಂಘಟನೆಗಳಿಂದ ಎಚ್ಚರಿಕೆ

ಸಿಆರ್‌ಪಿಎಫ್‌ ಯೋಧರನ್ನು ಹೊತ್ತು ಸಾಗುತ್ತಿದ್ದ ಬಸ್‌ಗೆ 20 ವರ್ಷದ ಜೈಷ್‌ ಎ ಮೊಹಮ್ಮದ್‌ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ವಾಹನ ಡಿಕ್ಕಿ ಹೊಡೆಸಿ ನಡೆಸಿದ ಈ ದಾಳಿಯಲ್ಲಿ 42 ಯೋಧರು ವೀರಮರಣವನ್ನಪ್ಪಿದ್ದರು. ಇತಿಹಾಸದಲ್ಲೇ ಅತ್ಯಂತ ಘೋರ ದುರಂತ  ಇದಾಗಿದ್ದು, ಈ ಕೃತ್ಯಕ್ಕೆ 350ಕೆಜಿಯಷ್ಟು ಸ್ಫೋಟಕ ಸಾಮಾಗ್ರಿ ಬಳಕೆ ಮಾಡಲಾಗಿದೆ.

Follow Us:
Download App:
  • android
  • ios