ಈ ವೇಳೆ ತಮ್ಮ ವಯಸ್ಸು ಹಾಗೂ ಅನಾರೋಗ್ಯವನ್ನು ಪರಿಗಣಿಸಿ ಕಡಿಮೆ ಶಿಕ್ಷೆ ನೀಡುವಂತೆ ಲಾಲು ಕೋರಿಕೊಂಡರು.

ರಾಂಚಿ(ಜ.05): ಮೇವು ಹಗರಣದಲ್ಲಿ ದೋಷಿಗಳಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಮತ್ತು ಇತರ 10 ಮಂದಿಯ ವಿರುದ್ಧದ ಶಿಕ್ಷೆಯ ಪ್ರಮಾಣವನ್ನು ಸಿಬಿಐ ಕೋರ್ಟ್ ಶನಿವಾರ ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಿದೆ. ಡಿ. 23ರಂದು ದೋಷಿ ಎಂದು ಘೋಷಿಸಲ್ಪಟ್ಟ ಬಳಿಕ ಬಿರ್ಸಾ ಮುಂಡಾ ಕೇಂದ್ರೀಯ ಜೈಲಿನಲ್ಲಿರುವ ಲಾಲು, ಶಿಕ್ಷೆಯ ಪ್ರಮಾಣದ ಕುರಿತ ವಾದ ಮಂಡನೆಗೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವೇಳೆ ತಮ್ಮ ವಯಸ್ಸು ಹಾಗೂ ಅನಾರೋಗ್ಯವನ್ನು ಪರಿಗಣಿಸಿ ಕಡಿಮೆ ಶಿಕ್ಷೆ ನೀಡುವಂತೆ ಲಾಲು ಕೋರಿಕೊಂಡರು. ಉಭಯ ಬಣಗಳ ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ ಶನಿವಾರ ಮಧ್ಯಾಹ್ನ 2 ಗಂಟೆಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಹೇಳಿತು.