ಒಂದು ಕಡೆ ಬಿಜೆಪಿ ಕೇಂದ್ರದಲ್ಲಿ ಮತ್ತೊಂದು ಸಾರಿ ಅಧಿಕಾರಕ್ಕೆ ಏರಲು ಮುಂದಾಗಿದೆ. ಆದರೆ ಇತ್ತ ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಚಿಕಿತ್ಸೆಗೆ ಇಂಗ್ಲೆಂಡ್ ಗೆ ತೆರಳಬೇಕಿದ್ದು ಪಾಸ್ ಪೋರ್ಟ್ಮೇಲಿನ ನಿರ್ಬಂಧ ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ[ಮೇ. 29] ದೊಡ್ಡ ಕರುಳಿನಲ್ಲಿ ಗಡ್ಡೆ ಇದ್ದು ಇದಕ್ಕೆ ಟ್ರೀಟ್ ಮೆಂಟ್ ತೆಗೆದುಕೊಳ್ಳಲು ಇಂಗ್ಲೆಂಡ್ ಗೆ ತೆರಳಬೇಕಾಗಿದೆ ಹಾಗಾಗಿ ಪಾಸ್ ಪೋರ್ಟ್ ಮೇಲಿನ ನಿರ್ಬಂಧ ತೆಗೆದು ವಿದೇಶಕ್ಕೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ರಾಬರ್ಟ್ ವಾದ್ರಾ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಆರೈಕೆಗಾಗಿ ಲಂಡನ್ ಗೆ ತೆರಳಬೇಕಿದ್ದು ಪಾಸ್ ಪೋರ್ಟ್ ಮೇಲಿನ ನಿರ್ಬಂಧ ತೆಗೆದು ಹಾಕಬೇಕು ಎಂದು ಕೇಳಿಕೊಂಡಿದ್ದಾರೆ. ದೆಹಲಿ ಗಂಗಾರಾಮ್ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಕೊಂಡಿರುವ ವಾದ್ರಾ ವಿದೇಶಕ್ಕೆ ತೆರಳಲು ಅನುಮತಿ ಕೇಳಿದ್ದಾರೆ. 

ವಾದ್ರಾ ಪರ ವಕೀಲರಾದ ಕೆಟಿಎಸ್ ತುಳಸಿ ವಾದ ಮುಂದಿಟ್ಟಿದ್ದು, ತನಿಖೆಗೆ ನಮ್ಮ ಕಕ್ಷಿದಾದರರು ಎಲ್ಲ ರೀತಿಯ ಸಹಕಾರ ನೀಡುತ್ತ ಬಂದಿದ್ದಾರೆ. ವಾದ್ರಾ ಇಂಗ್ಲೆಂಡಿನಿಂದ ವಾಪಸಾದ ಮೇಲೆಯೂ ಮುಂದಿನ ವಿಚಾರಣೆ ನಡೆಸಬಹುದು ಎಂದು ಹೇಳಿದ್ದಾರೆ. ಅಕ್ರಮ ಹಣ ವಹಿವಾಟು ಪ್ರಕರಣದಲ್ಲಿ ವಾದ್ರಾ ತನಿಖೆ ಎದುರಿಸುತ್ತಿದ್ದಾರೆ.