ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಜೆಡಿಯು ನಾಯಕಿ ಮನೋರಮಾ ದೇವಿ ಪುತ್ರ ರಾಕಿ ಯಾದವ್ ಹಾಗೂ ಇನ್ನಿಬ್ಬರು ಆರೋಪಿಗಳಿಗೆ ಗಯಾ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ.

ಪಾಟ್ನಾ: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಜೆಡಿಯು ನಾಯಕಿ ಮನೋರಮಾ ದೇವಿ ಪುತ್ರ ರಾಕಿ ಯಾದವ್ ಹಾಗೂ ಇನ್ನಿಬ್ಬರು ಆರೋಪಿಗಳಿಗೆ ಗಯಾ ಜಿಲ್ಲಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ಘೋಷಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಕಿ ಯಾದವ ತಂದೆ ಬಿಂದಿ ಯಾದವ್'ಗೆ ನ್ಯಾಯಾಲಯವು 5 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

ತನ್ನ ಕಾರಿಗೆ ದಾರಿ ಕೊಡಲಿಲ್ಲ ಎಂಬ ಕಾರಣಕ್ಕೆ ರಾಕಿ ಯಾದವ್, ಆದಿತ್ಯ ಸಚದೇವ ಎಂಬ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಘಟನೆ ಕಳೆದ ವರ್ಷ ಮೇ 7ರಂದು ಬಿಹಾರದ ಗಯಾದಲ್ಲಿ ನಡೆದಿತ್ತು.

ಕಳೆದ ಅಕ್ಟೋಬರ್ 19ರಂದು ಪಾಟ್ನಾ ಹೈಕೋರ್ಟ್ ಆರೋಪಿ ರಾಕಿ ಯಾದವ್’ಗೆ ಜಾಮೀನು ನೀಡಿತ್ತು. ಆದರೆ ಪಾಟ್ನಾ ಹೈಕೋರ್ಟ್ ನೀಡಿರುವ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಹಾಗೂ ಪ್ರಕರಣವನ್ನು ವಿಚಾರಣೆ ನಡೆಸಿ ಸೆ. 5ರೊಳಗೆ ತೀರ್ಪು ನೀಡುವಂತೆ ಸುಪ್ರೀಂ ಸೂಚಿಸಿತ್ತು.

ಕಳೆದ 15 ತಿಂಗಳುಗಳಲ್ಲಿ ಈ ಪ್ರಕರಣವು ಭಾರಿ ತಿರುವುಗಳನ್ನು ಪಡೆದುಕೊಂಡಿತ್ತು. ಪ್ರಕರಣದ 4 ಆರೋಪಿಗಳ ಪೈಕಿ 3 ಮಂದಿ ರಾಕಿ ಯಾದವ್ ಕುಟುಂಬಸ್ಥರೇ ಆಗಿದ್ದಾರೆ.