ಉಪ್ಪಿ ಪಕ್ಷದಿಂದ ರೂಪಾ ಅಯ್ಯರ್ ಮೈಸೂರಲ್ಲಿ ಸ್ಪರ್ಧೆ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಿತ್ರನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರು ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಚಿತ್ರನಟ ಉಪೇಂದ್ರ ಅವರ ಕೆಪಿಜೆಪಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಿತ್ರನಟಿ, ನಿರ್ದೇಶಕಿ ರೂಪಾ ಅಯ್ಯರ್ ಅವರು ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಚಿತ್ರನಟ ಉಪೇಂದ್ರ ಅವರ ಕೆಪಿಜೆಪಿ ಪಕ್ಷದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.
ಈ ಬಗ್ಗೆ ಇದುವರೆಗೆ ಯಾವುದೇ ಅಂತಿಮ ತೀರ್ಮಾನ ಹೊರಬೀಳದೇ ಇದ್ದರೂ ಚಿಂತನೆ ನಡೆಸಿದ್ದಾರೆ. ತೆರೆಮರೆಯಲ್ಲಿ ಮಾತುಕತೆಯ ಪ್ರಯತ್ನಗಳು ನಡೆದಿದ್ದರೂ ರೂಪಾ ಅಯ್ಯರ್ ಅವರು ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.