ಬಾಲಾಕೋಟ್ ದಾಳಿಯ ಮಾಹಿತಿ ನೀಡಿದ ಪ್ರಧಾನಿ ಮೋದಿ| ಮೋಡ, ಮಳೆಯ ಲಾಭ ಪಡೆದು ದಾಳಿ ಎಂದ ಪ್ರಧಾನಿ| ಫೆ.26ರ ಬಾಲಾಕೋಟ್ ದಾಳಿಯ ರಹಸ್ಯ ಬಿಚ್ಚಿಟ್ಟ ಮೋದಿ| ಪಾಕಿಸ್ತಾನಿ ರೆಡಾರ್‌ನಿಂದ ತಪ್ಪಿಸಿಕೊಳ್ಳಲು ವಾತಾವರಣದ ಲಾಭ| ರಹಸ್ಯ ಮಾಹಿತಿ ಬಿಚ್ಚಿಟ್ಟ ಮೋದಿ ವಿರುದ್ಧ ಪ್ರತಿಪಕ್ಷಗಳು ಕಿಡಿ| ಟ್ವಿಟ್ ಮೂಲಕ ಮೋದಿ ವಾದ ಕುಹುಕವಾಡಿದ ಪ್ರತಿಪಕ್ಷಗಳು| 

ನವದೆಹಲಿ(ಮೇ.12): ಬಾಲಾಕೋಟ್ ವಾಯುದಾಳಿಯ ದಿನ ಮೋಡ ಮತ್ತು ಭಾರೀ ಮಳೆ ಸುರಿದ ಕಾರಣ, ಅದರ ಲಾಭ ಪಡೆದು ಪಾಕಿಸ್ತಾನಿ ರೆಡಾರ್‌ನಿಂದ ತಪ್ಪಿಸಿಕೊಂಡು ದಾಳಿ ನಡೆಸಲಾಗಿತ್ತು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬಾಲಾಕೋಟ್ ವಾಯುದಾಳಿಯ ಮಾಹಿತಿ ಬಿಚ್ಚಿಟ್ಟ ಮೋದಿ, ಫೆ.26ರಂದು ಮೋಡ ಕವಿದ ವಾತಾವರಣ ಮತ್ತು ಭಾರೀ ಮಳೆಯ ಸಂಭವ ಎದುರಾಗಿತ್ತು. ಹೀಗಾಗಿ ದಾಳಿಯ ಯೋಜನೆಯನ್ನು ಮುಂದೂಡಲು ತಜ್ಞರು ಬಯಸಿದ್ದರು. ಆದರೆ ನಾನು ವಾತಾವರಣದ ಲಾಭ ಪಡೆದು ಪಾಕಿಸ್ತಾನಿ ರೆಡಾರ್‌ನಿಂದ ಕಣ್ತಪ್ಪಿಸಿಕೊಂಡು ದಾಳಿ ನಡೆಸುವ ನಿರ್ಧಾರಕ್ಕೆ ಬಂದಿದ್ದಾಗಿ ಹೇಳಿದ್ದಾರೆ.

Scroll to load tweet…

ಆದರೆ ಮೋದಿ ಅವರ ವಾದವನ್ನು ಕುಹುಕವಾಡಿರುವ ಪ್ರತಿಪಕ್ಷಗಳು, ಅತ್ಯಂತ ರಹಸ್ಯವಾಗಿಡಬೇಕಿದ್ದ ಕಾರ್ಯಾಚರಣೆಯ ಮಾಹಿತಿಯನ್ನು ಮೋದಿ ಜಗಜ್ಜಾಹೀರುಗೊಳಿಸಿದ್ದಾರೆ ಎಂದು ಕಿಡಿಕಾರಿವೆ. ಅಲ್ಲದೇ ಮೋಡ, ಮಳೆಯ ಮೋದಿ ಪ್ಲ್ಯಾನ್ ಕುರಿತು ಕುಹುಕವಾಡಿವೆ.

Scroll to load tweet…

ಬಿಜೆಪಿ ಈ ಮೊದಲು ಮೋದಿ ಸಂದರ್ಶನವನ್ನು ಟ್ವಿಟ್ ಮಾಡಿತ್ತು. ಆದರೆ ಈ ಕುರಿತು ಪ್ರಶ್ನೆಗಳೆದ್ದ ಮೇಲೆ ಟ್ವಿಟ್ ಡಿಲೀಟ್ ಮಾಡಿತ್ತಾದರೂ, ಪ್ರತಿಪಕ್ಷಗಳು ಸ್ಕ್ರೀನ್ ಶಾಟ್ ಮೂಲಕ ಬಿಜೆಪಿ ವಿರುದ್ಧ ಮುಗಿ ಬಿದ್ದಿವೆ.

Scroll to load tweet…

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ