ಜು.21 ರ ಬಳಿಕ ಪ್ರತೀ ಲೀಟರ್ ಹಾಲನ್ನು 25 ರು.ಗೆ ಖರೀದಿಸಲಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ
ಮುಂಬೈ: ಮಹಾರಾಷ್ಟ್ರ ಹಾಲು ಉತ್ಪಾದಕರಿಂದ ಹಾಲು ಒಕ್ಕೂಟಗಳು ಖರೀದಿಸುವ ಹಾಲಿನ ದರ ಏರಿಕೆ ಮಾಡಬೇಕೆಂಬ ಬೇಡಿಕೆ ಈಡೇರಿದ ಹಿನ್ನೆಲೆ ಯಲ್ಲಿ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿದ್ದ ನಾಲ್ಕು ದಿನಗಳ ಪ್ರತಿಭಟನೆಯನ್ನು ರೈತರು ವಾಪಸ್ ಪಡೆದಿದ್ದಾರೆ.
ಜು.21 ರ ಬಳಿಕ ಪ್ರತೀ ಲೀಟರ್ ಹಾಲನ್ನು 25 ರು.ಗೆ ಖರೀದಿಸಲಾಗುತ್ತದೆ ಎಂದು ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಹಿನ್ನೆಲೆ ಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದು ಸಂಸದ ಮತ್ತು ಧರಣಿ ಮುಂದಾಳತ್ವ ವಹಿಸಿಕೊಂಡಿದ್ದ ಸ್ವಾಭಿಮಾನಿ ಶಟ್ಕಾರಿ ಸಂಘ ಟನೆ ಮುಖಂಡ ರಾಜು ಶೆಟ್ಟಿ ತಿಳಿಸಿದ್ದಾರೆ.
