ನ್ಯಾಷನಲ್ ಹೆರಾಲ್ಡ್ ವಿರುದ್ಧ ಮತ್ತೆ ಕೋರ್ಟ್ ಮೆಟ್ಟಿಲೇರಿದ ಸುಬ್ರಮಣಿಯನ್ ಸ್ವಾಮಿ: ಗಾಂಧಿ ಕುಟುಂಬದಲ್ಲಿ ನಡುಕ
ಎಐಸಿಸಿ ಅಧ್ಯಕ್ಷರಾಗಿ ಭಾರಿ ಹುಮ್ಮಸ್ಸಿನಿಂದ ರಾಹುಲ್ ಗಾಂಧಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೊಸ ಬಾಂಬ್ ನಿಂದಾಗಿ ಗಾಂಧಿ ಕುಟುಂಬದಲ್ಲಿ ನಡುಕ ಶುರುವಾಗಿದೆ.
ನವದೆಹಲಿ (ಜ.20): ಎಐಸಿಸಿ ಅಧ್ಯಕ್ಷರಾಗಿ ಭಾರಿ ಹುಮ್ಮಸ್ಸಿನಿಂದ ರಾಹುಲ್ ಗಾಂಧಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೊಸ ಬಾಂಬ್ ನಿಂದಾಗಿ ಗಾಂಧಿ ಕುಟುಂಬದಲ್ಲಿ ನಡುಕ ಶುರುವಾಗಿದೆ.
ರಾಹುಲ್ ಗಾಂಧಿ ಇತ್ತೀಚೆಗೆ ವಿವಿಧ ರಾಜ್ಯಗಳ ಟೆಂಪಲ್ ರನ್ ಮೂಲಕ ಅಧಿಕಾರ ಹಿಡಿಯಲು ಶ್ರಮಿಸುತ್ತಿದ್ದು, ಆದ್ರೆ ಸುಬ್ರಮಣಿಯನ್ ಸ್ವಾಮಿ ತೆರಿಗೆ ವಂಚನ ಆರೋಪದಿಂದ ದೇಶಾದ್ಯಂತ ಗಾಂಧಿ ಕುಟುಂಬಕ್ಕೆ ಮುಜುಗರ ಉಂಟಾಗಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿತ್ತು.. ಸ್ವಾತಂತ್ರ ಸೇನಾನಿಗಳಿಂದಲೇ ಅಸೋಸಿಯೇಟೆಡ್ ಜರ್ನಲ್ಸ್ ಕಂಪನಿಯನ್ನು ಸೋನಿಯಾ, ರಾಹುಲ್ ಗಾಂಧಿ ಯಂಗ್ ಇಂಡಿಯಾ ಸಂಸ್ಥೆ ಮೂಲಕ ದೆಹಲಿ , ಉತ್ತರ ಪ್ರದೇಶದಲ್ಲಿದ್ದ 2000 ಕೋಟಿ ಆಸ್ತಿಯನ್ನು ಕಬಳಿಸಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ದೆಹಲಿ ಕೋರ್ಟ್ನಲ್ಲಿ ದೂರು ದಾಖಲಿಸಿದ್ದರು. ನಂತರ ವಿಚಾರಣೆಯಿಂದ ರಾಹುಲ್, ಸೋನಿಯಾ ಜಾಮೀನು ಪಡೆದು ನಿಟ್ಟುಸಿರು ಪಡೆದಿದ್ದರು. ಆದರೆ ಈಗ ಸ್ವಾಮಿ ಹೊಸ ಬಾಂಬ್ ಸಿಡಿಸಿದ್ದು, ಕಾಂಗ್ರೆಸ್ಸಿಗರಲ್ಲಿ ನಡುಕ ಶುರುವಾಗಿದೆ.. ನ್ಯಾಷನಲ್ ಹೆರಾಲ್ಡ್ 2000 ಕೋಟಿ ರೂಪಾಯಿ ಆಸ್ತಿಯಲ್ಲಿ ಗಾಂಧಿ ಕುಟುಂಬ ಭಾರಿ ಪ್ರಮಾಣದ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಕೋರ್ಟ್ ಮೆಟ್ಟಿಲೇರಿದ್ದಾರೆ..
ಗಾಂಧಿ ಕುಟುಂಬದ ವಿರುದ್ಧ ತೆರಿಗೆ ವಂಚನೆಯ 105 ಪುಟಗಳ ದಾಖಲೆಯನ್ನು ಮುಚ್ಚಿದ ಲಕೋಟೆಯಲ್ಲಿ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯನ್ನು ಮಾರ್ಚ್ 17ಕ್ಕೆ ನ್ಯಾಯಾಲಯ ಮುಂದೂಡಿದ್ದು, ಎಲ್ಲರಲ್ಲಿ ಕುತೂಹಲ ಹೆಚ್ಚಿಸಿದೆ.