ರಾಮ ಮಂದಿರ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್! ‘ಆರ್‌ಎಸ್‌ಎಸ್ ಪ್ರತಿಕ್ರಿಯೆ ಹಿಂದೂಗಳ ಆತಂಕದ ಪ್ರತೀಕ’! ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅಭಿಮತ! ‘ನ್ಯಾಯಾಂಗ 1992 ರ ವಿಳಂಬವನ್ನೇ ಪುನರಾವರ್ತನೆ ಮಾಡುತ್ತಿದೆ’! ‘ಆರ್‌ಎಸ್ಎಸ್ ನ ಪ್ರಶ್ನೆ ಹಿಂದೂಗಳ ಆತಂಕವನ್ನು ಅಭಿವ್ಯಕ್ತಗೊಳಿಸುತ್ತಿದೆ’

ನವದೆಹಲಿ(ನ.3): ರಾಮಮಂದಿರ ವಿವಾದದ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂ ಕೋರ್ಟ್ ನಿರ್ಧಾರಕ್ಕೆ ಹಲವು ಸಂಘಟನೆಗಳು ಬೇಸರ ವ್ಯಕ್ತಪಡಿಸಿದ್ದು, ಮಂದಿರ ನಿರ್ಮಾಣಕ್ಕೆ ಕಾನೂನು ಜಾರಿಗೊಳಿಸಬೇಕೆಂದು ಪಟ್ಟು ಹಿಡಿದಿವೆ.

Add Asianetnews Kannada as a Preferred SourcegooglePreferred
Scroll to load tweet…

ಈ ನಡುವೆ ಬಿಜೆಪಿ ಮುಖಂಡ ರಾಮ್ ಮಾಧವ್ ಆರ್‌ಎಸ್ಎಸ್ ಈ ವಿಚಾರವಾಗಿ ತೆಗೆದುಕೊಂಡಿರುವ ನಿಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನ್ಯಾಯಾಂಗ 1992 ರ ವಿಳಂಬವನ್ನೇ ಪುನರಾವರ್ತನೆ ಮಾಡುತ್ತಿದೆ. ನ್ಯಾಯಾಂಗದ ತೀರ್ಪಿಗೆ ಇನ್ನೆಷ್ಟು ವರ್ಷ ಕಾಯಬೇಕು ಎಂಬ ಆರ್‌ಎಸ್ಎಸ್ ಪ್ರಶ್ನೆ ಹಿಂದೂಗಳ ಆತಂಕವನ್ನು ಅಭಿವ್ಯಕ್ತಗೊಳಿಸುತ್ತಿದೆ ಎಂದು ಹೇಳಿದ್ದಾರೆ.

Scroll to load tweet…

ರಾಮಮಂದಿರ ವಿಷಯಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ಸ್ಪಷ್ಟಪಡಿಸಿದ್ದ ಆರ್‌ಎಸ್ಎಸ್, ರಾಮಮಂದಿರ ನಿರ್ಮಾಣಕ್ಕಾಗಿ ಅಗತ್ಯವಿದ್ದರೆ ಚಳುವಳಿ ಪ್ರಾರಂಭಿಸುವುದಾಗಿಯೂ ಹೇಳಿತ್ತು. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರಾಮ್ ಮಾಧವ್, ನ್ಯಾಯಾಂಗ 1992 ರಲ್ಲಿ ಯಾವ ರೀತಿಯಲ್ಲಿ ವಿಳಂಬವನ್ನೇ ಈಗಲೂ ಪುನರಾವರ್ತನೆ ಮಾಡುತ್ತಿದೆ, ಈ ಹಿನ್ನೆಲೆಯಲ್ಲಿ ಆರ್‌ಎಸ್ಎಸ್ ಹೇಳಿಕೆ ಹಿಂದೂಗಳ ಆತಂಕವನ್ನು ಅಭಿವ್ಯಕ್ತಿಗೊಳಿಸುವ ರೀತಿಯಲ್ಲಿದೆ ಎಂದಿದ್ದಾರೆ.