‘ದೇಶ ವಿರೋಧಿ ಶಕ್ತಿಗಳು ರಾಷ್ಟ್ರದ ಶಾಂತಿ ಹಾಳು ಮಾಡುತ್ತಿವೆ’| ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಿಡಿ| ಕಾನ್ಪುರದಲ್ಲಿ ಗಣರಾಜ್ಯೋತ್ಸವ ಭಾಷಣ ಮಾಡಿದ ಭಾಗವತ್| ಭಾರತದ ವಿಶ್ವಗುರುವಾಗಲು ಎಲ್ಲರೂ ಶ್ರಮಿಸಬೇಕು ಎಂದ ಭಾಗವತ್

ಕಾನ್ಪುರ(ಜ.27): ದೇಶ ವಿರೋಧಿ ಶಕ್ತಿಗಳು ರಾಷ್ಟ್ರದ ಶಾಂತಿ ಹಾಳು ಮಾಡುತ್ತಿವೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಣರಾಜ್ಯೋತ್ಸವ ಅಂಗವಾಗಿ ಕಾನ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್, ದೇಶದ ಪ್ರಗತಿ ಬಯಸದ ಈ ದುಷ್ಟ ಶಕ್ತಿಗಳು ಸಮಾಜದಲ್ಲಿ ಶಾಂತಿ ಕದಡುವ ಮೂಲಕ ತಮ್ಮ ಲಾಭ ಮಾಡಿಕೊಳ್ಳುತ್ತಿವೆ ಎಂದು ಹರಿಹಾಯ್ದರು.

ಯಾರ ವಿನಾಶವನ್ನೂ ನಾವು ಬಯಸುವುದಿಲ್ಲ, ಎಲ್ಲರೂ ಸಂತೋಷವಾಗಿರಬೇಕು ಎಂಬುದೇ ಸಂಘದ ಆಶಯ ಎಂದು ಭಾಗವತ್ ಈ ವೇಳೆ ಹೇಳಿದರು.

Scroll to load tweet…

ಆದರೆ ದೇಶ ವಿರೋಧಿ ಶಕ್ತಿಗಳು ಶಾಂತಿ ನಾಶ ಮಾಡಲು ಪ್ರಯತ್ನಿಸುತ್ತಿದ್ದು, ಅವರ ಉದ್ದೇಶ ಎಂದೂ ಈಡೇರುವುದಿಲ್ಲ ಎಂದು ಭಾಗವತ್ ಭರವಸೆ ನೀಡಿದರು.

ಭಾರತ ವಿಶ್ವಗುರುವಾಗುವತ್ತ ಹೆಜ್ಜೆ ಇರಿಸಿದ್ದು, ಪ್ರತಿಯೊಬ್ಬ ಭಾರತೀಯ ಈ ಕಾರ್ಯ ಸಾಧನೆಗೆ ನೆರವಾಗಬೇಕು ಎಂದು ಭಾಗವತ್ ಕರೆ ನೀಡಿದರು.