ಕೇರಳದಲ್ಲಿ ಆರ್‌'ಎಸ್‌'ಎಸ್ ಕಾರ್ಯಕರ್ತರ ಕೊಲೆಗೆ ವಿಜಯನ್ ಅವರೇ ಕಾರಣ ಎಂದು ಆರೋಪಿಸಿದ್ದ ಚಂದ್ರಾವತ್, ಸಿಎಂ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ.

ಉಜ್ಜಯಿನಿ(ಮಾ.28): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದ ಆರ್‌'ಎಸ್‌'ಎಸ್'ನ ಮಾಜಿ ಕಾರ್ಯಕರ್ತ ಕುಂದನ್ ಚಂದ್ರಾವತ್‌ನನ್ನು ಬಂಧಿಸಲಾಗಿದೆ.

Add Asianetnews Kannada as a Preferred SourcegooglePreferred

ಚಂದ್ರಾವತ್‌'ನನ್ನು ಸೋಮವಾರ ಬಂಧಿಸಲಾಗಿದ್ದು, ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದಲ್ಲಿ ಆರ್‌'ಎಸ್‌'ಎಸ್ ಕಾರ್ಯಕರ್ತರ ಕೊಲೆಗೆ ವಿಜಯನ್ ಅವರೇ ಕಾರಣ ಎಂದು ಆರೋಪಿಸಿದ್ದ ಚಂದ್ರಾವತ್, ಸಿಎಂ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿತ್ತು.

ಕುಂದನ್ ಚಂದ್ರಾವತ್ ಅವರ ಹೇಳಿಕೆಯನ್ನು ಖಂಡಿಸಿ ಅವರನ್ನು ಆರೆಸ್ಸೆಸ್ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಲಾ 

ಈ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಸಂಬಂಧ ಮಾಧವ್ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.