ಕೇರಳದಲ್ಲಿ ಆರ್'ಎಸ್'ಎಸ್ ಕಾರ್ಯಕರ್ತನ ಹತ್ಯೆ
ಆರ್ಎಸ್ಎಸ್ ಹಾಗೂ ಸಿಪಿಎಂ ಕಾರ್ಯಕರ್ತರ ಹತ್ಯಾ ಸರಣಿ ಮುಂದುವರಿದಿದೆ. ತ್ರಿಶೂರ್ನಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಆನಂದ್ನನ್ನು ಆರು ಮಂದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ಕೇರಳ(ನ.12): ಆರ್ಎಸ್ಎಸ್ ಹಾಗೂ ಸಿಪಿಎಂ ಕಾರ್ಯಕರ್ತರ ಹತ್ಯಾ ಸರಣಿ ಮುಂದುವರಿದಿದೆ. ತ್ರಿಶೂರ್ನಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಆನಂದ್ನನ್ನು ಆರು ಮಂದಿ ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ಮೃತ ಆನಂದ ಸಿಪಿಎಂ ಕಾರ್ಯಕರ್ತನ ಹತ್ಯೆ ಆರೋಪಿಯಾಗಿದ್ದು, ಇತ್ತೀಚೆಗೆ ಬೇಲ್ ಪಡೆದು ಜೈಲಿನಿಂದ ಹೊರ ಬಂದಿದ್ದ. ಆನಂದ್ ಬೈಕ್ನಲ್ಲಿ ಹೋಗುತ್ತಿದ್ದಾಗ ಕಾರಿನಿಂದ ಡಿಕ್ಕಿ ಹೊಡೆದು ಕೆಳಗೆ ಬಿದ್ದಾಗ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದರೂ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.