Asianet Suvarna News Asianet Suvarna News

ರುದ್ರೇಶ್ ಹತ್ಯೆ ಆರೋಪಿಗಳಿಂದ ಐವರು ಪತ್ರಕರ್ತರ ಮೇಲೆ ದಾಳಿಗೆ ಸಂಚು: ಎನ್'ಐಎ ತನಿಖೆಯಲ್ಲಿ ಬಹಿರಂಗ

ಇದೀಗ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಈ ಮೊದಲು ವಿಜಯಕರ್ನಾಟಕ ಮತ್ತು ಕನ್ನಡಪ್ರಭದಲ್ಲಿ ಪ್ರಮುಖ ಅಂಕಣಕಾರರಾಗಿ ಬಲಪಂಥೀಯ ವಿಚಾರಗಳನ್ನು ಪ್ರಸ್ತುತಪಡಿಸುತ್ತಿದ್ದರು. ವಿಶ್ವೇಶ್ವರಭಟ್ ಕೂಡ ಬಲಪಂಥೀಯ ವಿಚಾರಧಾರೆಯ ಪತ್ರಕರ್ತರಾಗಿದ್ದಾರೆ.

rudresh murder accused had planned to attack journalists

ಬೆಂಗಳೂರು(ಏ. 11): ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿಗಳು ಈ ಹಿಂದೆ ಬಲಪಂಥೀಯ ಪತ್ರಕರ್ತರು, ಪತ್ರಿಕೋದ್ಯಮಿಗಳ ಹತ್ಯೆಗೆ ಸಂಚು ರೂಪಿಸಿರುವ ಸಂಗತಿ ತನಿಖೆ ವೇಳೆ ಬೆಳಕಿಗೆ ಬಂದಿದೆ. ಪ್ರತಾಪ್ ಸಿಂಹ, ವಿಶ್ವೇಶ್ವರ ಭಟ್, ವಿಜಯಸಂಕೇಶ್ವರ ಸೇರಿದಂತೆ ಐವರ ಮೇಲೆ ದಾಳಿ ಎಸಗಲು ಈ ಆರೋಪಿಗಳು ಯೋಜಿಸಿದ್ದರೆನ್ನಲಾಗಿದೆ. ಈ ಸಂಬಂಧ ಎನ್'ಐಎ ಅಧಿಕಾರಿಗಳು ಸದ್ಯದಲ್ಲೇ ಕೋರ್ಟ್'ನಲ್ಲಿ ಚಾರ್ಜ್'ಶೀಟ್ ಸಲ್ಲಿಸಲಿದ್ದಾರೆ.

ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಇರ್ಫಾನ್, ವಾಸೀಮ್, ನಜರ್ ಮುಸಿಬುಲ್ಲಾ, ಅಸೀಫ್ ಷರೀಫ್ ಅವರು ಬಂಧಿತರಾಗಿದ್ದಾರೆ. ಈ ಆರೋಪಿಗಳು ಇಂಡಿಯನ್ ಮುಜಾಹಿದೀನ್ ಮತ್ತು ಅಲ್ ಉಮ್ಮಾ ಮೊದಲಾದ ಉಗ್ರ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವುದೂ ತನಿಖೆ ವೇಳೆ ತಿಳಿದುಬಂದಿದೆ. ಪ್ರಮುಖ ಆರೋಪಿ ಅಸೀಫ್ ಷರೀಫ್ ಎಸ್'ಡಿಪಿಐ ಸಂಘಟನೆಯ ಅಧ್ಯಕ್ಷ ಕೂಡ ಹೌದು. ಅಲ್ಲದೆ, ಈ ಆರೋಪಿಗಳು ಬೆಂಗಳೂರು, ಮಂಗಳೂರು ಮತ್ತು ಕೇರಳದಲ್ಲಿ 6ಕ್ಕೂ ಹೆಚ್ಚು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ಇದೆ.

ಇದೀಗ ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಈ ಮೊದಲು ವಿಜಯಕರ್ನಾಟಕ ಮತ್ತು ಕನ್ನಡಪ್ರಭದಲ್ಲಿ ಪ್ರಮುಖ ಅಂಕಣಕಾರರಾಗಿ ಬಲಪಂಥೀಯ ವಿಚಾರಗಳನ್ನು ಪ್ರಸ್ತುತಪಡಿಸುತ್ತಿದ್ದರು. ವಿಶ್ವೇಶ್ವರಭಟ್ ಕೂಡ ಬಲಪಂಥೀಯ ವಿಚಾರಧಾರೆಯ ಪತ್ರಕರ್ತರಾಗಿದ್ದಾರೆ.

ಇನ್ನು, ರುದ್ರೇಶ್ ಹತ್ಯೆ ಪ್ರಕರಣವು ಕರ್ನಾಟಕದ ಪೊಲೀಸರಿಂದ ಮತ್ತೊಮ್ಮೆ ಎನ್'ಐಎ ತನಿಖೆಗೆ ವರ್ಗವಾಗಿದೆ.

Latest Videos
Follow Us:
Download App:
  • android
  • ios