Asianet Suvarna News Asianet Suvarna News

ಈರುಳ್ಳಿಗೆ ರೂ.100 ಅನುದಾನ

Rupees 100 MSP for Onions

ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ರೈತರ ಈರುಳ್ಳಿಯ ಪ್ರತಿ ಕ್ವಿಂಟಲ್‌ಗೆ ರೂ.100 ಅನುದಾನ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಇದರಿಂದ ಈರುಳ್ಳಿ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ. ಮಂಗಳವಾರ ಸಿಎಂ ದೇವೇಂದ್ರ ಫಡ್ನವೀಸ್‌ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಜು.1ರಿಂದ ಆ.31 ರೊಳಗೆ ಎಪಿಎಂಸಿಯಲ್ಲಿ ಈರುಳ್ಳಿ ಮಾರಾಟ ಮಾಡಿದ ಎಲ್ಲ ರೈತರೂ ಅನುದಾನ ಪಡೆಯಬಹುದಾಗಿದೆ ಎಂದು ಫಡ್ನವೀಸ್‌ ಟ್ವೀಟ್‌ ಮಾಡಿದ್ದಾರೆ. ಆದರೆ, 1 ಕ್ವಿಂಟಲ್‌ ಈರುಳ್ಳಿ ಬೆಳೆಗೆ ರೈತರು .1250 ವಿನಿಯೋಗಿಸಿರುತ್ತಾರೆ. ಆದರೆ, ರೂ.100 ಅನುದಾನಕ್ಕೆ ಮುಂದಾಗಿದೆ ಎಂದು ಏಷ್ಯಾದ ಈರುಳ್ಳಿ ಮಾರುಕಟ್ಟೆಸಮಿತಿಯ ಅಧ್ಯಕ್ಷ ನಾನಾಸಾಹೇಬ್‌ ಪಾಟೀಲ್‌ ಅಸಮಾಧಾನ ವ್ಯರ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios