ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಿಂಸಾಚಾರದಲ್ಲಿ ಒಟ್ಟು 1400 ಮಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. 

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ 10 - 50 ವರ್ಷದೊಳಗಿನ ಮಹಿಳೆಯರಿಗೆ ಅಡ್ಡಿಪಡಿಸಿದ್ದ 1400 ಮಂದಿಯನ್ನು ಬಂಧಿಸುವಲ್ಲಿ ಕೇರಳ ಪೊಲೀಸರು ಯಶಸ್ವಿ ಯಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದೇಗುಲ ಪ್ರವೇಶಕ್ಕೆ ಮಹಿಳೆಯರು ಮುಂದಾದಾಗ ರಾಜ್ಯಾದ್ಯಂತ 440 ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಗುರುವಾರ ಹೇಳಿದ್ದಾರೆ. 

ಈ ನಡುವೆ, ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಕೇರಳ ರಾಜ್ಯಪಾಲ ಪಿ.ಸದಾಶಿವಂ ಅವರು, ಕೇರಳದಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮಾಹಿತಿ ನೀಡಿದರು.