ಎಲ್ಲ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರವೇಶ ನೀಡಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ್ನು ವಿರೋಧಿಸಿ, ಕೇರಳದಲ್ಲಿ ಪ್ರತಿಭಟನೆಗಳು ಹೆಚ್ಚುತ್ತಿವೆ.

ತಿರುವನಂತಪುರ: ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದನ್ನು ವಿರೋಧಿಸಿ ಅಯ್ಯಪ್ಪನ ಭಕ್ತಾದಿಗಳು ಮತ್ತು ವಿವಿಧ ಸಂಘಟನೆಗಳು ಕೇರಳದಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆ ಮತ್ತಷ್ಟುತೀವ್ರ ಸ್ವರೂಪ ಪಡೆದುಕೊಂಡಿದೆ. ಶುಕ್ರವಾರ ಕೂಡಾ ರಾಜ್ಯದ ವಿವಿಧೆಡೆ ಭಾರೀ ಪ್ರತಿಭಟನೆ ನಡೆದಿದೆ. ಈ ನಡುವೆ ಪ್ರತಿಭಟನೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಪಕ್ಷಗಳು ಹಾಗೂ ಕೇರಳದಲ್ಲಿ ವಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್‌ ಕೂಡಾ ಬೆಂಬಲ ವ್ಯಕ್ತಪಡಿಸಿರುವ ಕಾರಣ, ಹೋರಾಟಕ್ಕೆ ಮತ್ತಷ್ಟುಕಾವು ಸಿಕ್ಕಿದೆ.

Add Asianetnews Kannada as a Preferred SourcegooglePreferred

ಸುಪ್ರೀಂ ತೀರ್ಪು ವಿರೋಧಿಸಿ ಹಾಗೂ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದೇ ಇರಲು ನಿರ್ಧರಿಸಿರುವ ಕೇರಳ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ನೇತೃತ್ವದ ಎನ್‌ಡಿಎ ಶಬರಿಮಲೆ ಉಳಿಸಿ ಎಂಬ ಪ್ರತಿಭಟನಾ ಮೆರವಣಿಗೆ ಆಯೋಜಿಸಿದೆ. ಶುಕ್ರವಾರ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಸಂಸದರಾದ ಪಿ.ಸಿ.ಮೋಹನ್‌, ಮೈಸೂರು- ಕೊಡಗು ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಹಲವು ಎನ್‌ಡಿಎ ನಾಯಕರು ಭಾಗವಹಿಸಿದ್ದರು. ಈ ರಾರ‍ಯಲಿ ಅ.15ರಂದು ರಾಜ್ಯ ವಿಧಾನಸಭೆ ಮುಂಭಾಗದಲ್ಲಿ ಮುಕ್ತಾಯವಾಗಲಿದೆ.

ಈ ನಡುವೆ ಶಬರಿಮಲೆ ದೇಗುಲದೊಂದಿಗೆ ನಂಟುಹೊಂದಿರುವ ಪಂಡಲಂ ರಾಜಮನೆತನದ ಸದಸ್ಯರು ಮತ್ತು ವಿವಿಧ ರಾಜಕೀಯ ಪಕ್ಷಗಳ ನಾಯಕರು ಶುಕ್ರವಾರ ರಾಜ್ಯ ವಿಧಾನಸಭೆಯ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ರಾಜಮನೆತನದ ಶಶಿಕುಮಾರ ವರ್ಮಾ, ಕೇವಲ ಒಂದು ಕೋರ್ಟ್‌ ಆದೇಶದಿಂದ ಶತಮಾನಗಳ ಮೂಲಕ ನಡೆದುಬಂದ ಸಂಪ್ರದಾಯ ಅಳಿಸಿಹಾಕಲಾಗದು. ಕೋರ್ಟ್‌ ಆದೇಶವನ್ನು ರಾಜ್ಯ ಸರ್ಕಾರ ಪ್ರಶ್ನಿಸಬೇಕು ಎಂದು ಒತ್ತಾಯಿಸಿದರು.