20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ ನ್ಯಾಯಾಲಯ ಪ್ರಕಟಿಸಿದೆ.

ಜೋಧಪುರ: 20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ ನ್ಯಾಯಾಲಯ ಪ್ರಕಟಿಸಿದೆ.

Add Asianetnews Kannada as a Preferred SourcegooglePreferred

ಚಿತ್ರೋದ್ಯಮ ಹಾಗೂ ಸಲ್ಮಾನ್ ಖಾನ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದ ತೀರ್ಪು ಹೊರ ಬಂದಿದ್ದು, ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪಿತ್ತಿದೆ. 

ಸಲ್ಮಾನ್ ಖಾನ್’ಗೆ ಜೋದ್’ಪುರ ಕೋರ್ಟ್’ನಲ್ಲಿ 5 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ.

ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ ವೇಳೆ ನಡೆದಿದ್ದ ಬೇಟೆ ಪ್ರಕರಣ ಇದಾಗಿದ್ದು, ಸಲ್ಮಾನ್ ಖಾನ್ ಮಾತ್ರವೇ ಅಲ್ಲದೇ ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ ನೀಲಂ ದೋಷ ಮುಕ್ತರಾಗಿದ್ದಾರೆ.

ಏನಿದು ಪ್ರಕರಣ?:

ಚಿತ್ರೀಕರಣಕ್ಕೆಂದು ರಾಜಸ್ಥಾನದಲ್ಲಿ ತಂಗಿದ್ದ ಸಲ್ಮಾನ್ ಖಾನ್ ಹಾಗೂ ಇತರೆ ಆರೋಪಿಗಳು, 1998ರ ಅ.1 ಹಾಗೂ 2ರ ನಡುವಣ ರಾತ್ರಿ ಜೋಧಪುರ ಬಳಿಯ ಕಂಕಣಿ ಗ್ರಾಮದಲ್ಲಿ ಜಿಪ್ಸಿಯಲ್ಲಿ ಪ್ರಯಾಣಿಸುತ್ತಿದ್ದರು. ಆಗ ಅವರ ಕಣ್ಣಿಗೆ ಕೃಷ್ಣಮೃಗಗಳ ಹಿಂಡು ಕಾಣಿಸಿತ್ತು. ಚಾಲಕನ ಸೀಟಿನಲ್ಲಿ ಕೂತಿದ್ದ ಸಲ್ಮಾನ್ ಆ ಹಿಂಡಿನತ್ತ ಗುಂಡು ಹಾರಿಸಿದ್ದರು. 2 ಕೃಷ್ಣಮೃಗಗಳು ಮೃತಪಟ್ಟಿದ್ದವು. ಇದನ್ನು ಸಾರ್ವಜನಿಕರು ಗಮನಿಸಿ, ಬೆನ್ನಟ್ಟಿದಾಗ, ಮೃತ ಕೃಷ್ಣಮೃಗಗಳನ್ನು ಅಲ್ಲೇ ಬಿಟ್ಟು ಸಲ್ಮಾನ್ ಮತ್ತು ತಂಡ ಪರಾರಿಯಾಗಿತ್ತು ಎಂದು ಸರ್ಕಾರಿ ಅಭಿಯೋಜಕರು ವಾದಿಸಿದ್ದಾರೆ.

ಚಿಂಕಾರಾ ಬೇಟೆ ಕುರಿತ ಪ್ರಕರಣದಲ್ಲೂ ಸಲ್ಮಾನ್ ದೋಷಿ ಎಂದು ಸಾಬೀತಾಗಿ, 5 ವರ್ಷ ಶಿಕ್ಷೆಯಾಗಿತ್ತು. ಆದರೆ ರಾಜಸ್ಥಾನ ಹೈಕೋರ್ಟ್ ಸಲ್ಮಾನ್‌ರನ್ನು ಖುಲಾಸೆಗೊಳಿಸಿತ್ತು. ಇದರ ವಿರುದ್ಧ ರಾಜಸ್ಥಾನ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.