ಸಮರ್ಥವಾಗಿ ಅಧ್ಯಕ್ಷ ಪಟ್ಟವನ್ನು ಇಲ್ಲಿಯವರೆಗೆ ನಿಭಾಯಿಸಿದ ಸೋನಿಯಾ ಜಿ ಅವರಿಗೆ ನಮ್ಮ ಸಲ್ಯೂಟ್, ಅವರಂತೆಯೇ ರಾಹುಲ್ ಗಾಂಧಿ ಅವರೂ ಕೂಡ ನಿಭಾಯಿಸಿಕೊಂಡು ಹೋಗಲಿದ್ದಾರೆ ಎನ್ನುವ ಭರವಸೆ ನಮ್ಮಲ್ಲಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ನವದೆಹಲಿ (ಡಿ.16): ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಪಟ್ಟಾಭಿಷೇಕ ನೆರವೇರಿಸಲಾಗುತ್ತಿದೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ರಾಹುಲ್ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಈ ವೇಳೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಣ್ಯರ ಸಮ್ಮುಖದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾತನಾಡಿದ ಮನಮೋಹನ್ ಸಿಂಗ್ ಸೋನಿಯಾ ಗಾಂಧಿ ಅವರು ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷತೆ ವಹಿಸುತ್ತಿದ್ದಾರೆ.

ದೇಶದಾದ್ಯಂತ ಬಡತನ ಹೆಚ್ಚಿನ ಪ್ರಮಾಣದಲ್ಲಿದೆ. ಈ ಅನೇಕ ಸಮಸ್ಯೆಗಳು ದೇಶದಲ್ಲಿವೆ. ಈ ಸಮಸ್ಯೆಗಳನ್ನೆಲ್ಲಾ ರಾಹುಲ್ ನೇತೃತ್ವದಲ್ಲಿ ಪಕ್ಷವು ನಿವಾರಿಸುವ ಬಗ್ಗೆ ಗಮನವನ್ನು ಹರಿಸಲಿದೆ.

ಸಮರ್ಥವಾಗಿ ಅಧ್ಯಕ್ಷ ಪಟ್ಟವನ್ನು ಇಲ್ಲಿಯವರೆಗೆ ನಿಭಾಯಿಸಿದ ಸೋನಿಯಾ ಜಿ ಅವರಿಗೆ ನಮ್ಮ ಸಲ್ಯೂಟ್, ಅವರಂತೆಯೇ ರಾಹುಲ್ ಗಾಂಧಿ ಅವರೂ ಕೂಡ ನಿಭಾಯಿಸಿಕೊಂಡು ಹೋಗಲಿದ್ದಾರೆ ಎನ್ನುವ ಭರವಸೆ ನಮ್ಮಲ್ಲಿದೆ ಎಂದು ಹೇಳಿದ್ದಾರೆ.