ಸ್ಯಾಂಡಲ್ ವುಡ್ ನಿರ್ದೇಶಕ ಎಸ್ ನಾರಾಯಣ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಕೊಟ್ಯಂತರ ರು. ಸಾಲ ಮರುಪಾವತಿ ಮಾಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ಬಿಡುಗಡೆ ಮಾಡಲಾಗಿದೆ. 

ಬೆಂಗಳೂರು :  ಐಡಿಬಿಐ ಬ್ಯಾಂಕ್‌ಗೆ 3.10 ಕೋಟಿ ಸಾಲ ಮರು ಪಾವತಿಸದ ಪ್ರಕರಣದ ಸಂಬಂಧ ವಾರಂಟ್‌ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಬಸವೇಶ್ವರನಗರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್‌.ನಾರಾಯಣ್‌ ಅವರು ನ್ಯಾಯಾಲಯದಲ್ಲಿ ಜಾಮೀನು ಪಡೆದು ಬಂಧಮುಕ್ತರಾಗಿದ್ದಾರೆ.

Add Asianetnews Kannada as a Preferred SourcegooglePreferred

2013ರಲ್ಲಿ ಬ್ಯಾಂಕ್‌ನಿಂದ ಸಿನಿಮಾ ನಿರ್ಮಾಣ ಸಲುವಾಗಿ ನಾರಾಯಣ್‌ ಸಾಲ ಪಡೆದಿದ್ದರು. ಆದರೆ ಸಕಾಲಕ್ಕೆ ಸಾಲದ ಕಂತು ಕಟ್ಟದ ಕಾರಣಕ್ಕೆ ಅವರ ವಿರುದ್ಧ ನ್ಯಾಯಾಲಯದಲ್ಲಿ ಬ್ಯಾಂಕ್‌ ಪ್ರಕರಣ ದಾಖಲಿಸಿತ್ತು. ಈ ಬಗ್ಗೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯವು, ವಿಚಾರಣೆಗೆ ಆಗಮಿಸುವಂತೆ ನಿರ್ದೇಶಕರಿಗೆ ನೋಟಿಸ್‌ ನೀಡಿತ್ತು.

ಈ ನೋಟಿಸ್‌ಗೂ ಅವರು ಉತ್ತರಿಸದ ಹೋದ ಪರಿಣಾಮ ವಾರಂಟ್‌ ಜಾರಿಯಾಯಿತು. ನ್ಯಾಯಾಲಯದ ಆದೇಶದಂತೆ ಕಾರ್ಯಾಚರಣೆಗಿಳಿದ ಪೊಲೀಸರು, ಬೆಳಗ್ಗೆ ನಾರಾಯಣ್‌ ಅವರನ್ನು ಮಲ್ಲೇಶ್ವರದಲ್ಲಿ ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಆನಂತರ ನಾರಾಯಣ್‌ ಅವರಿಗೆ ಜಾಮೀನು ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.