ಸ್ಯಾಂಡಲ್​​ವುಡ್​ನ  30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶಿಸಿದ್ದ ‘ಧ್ರುವತಾರೆ’ ನಿರ್ದೇಶಕ ವಿಧಿವಶರಾಗಿದ್ದಾರೆ. ಯಾರವರು? ಇಲ್ಲಿದೆ ವಿವರ

ಬೆಂಗಳೂರು, [ಅ.29]: ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಎಂ.ಎಸ್​.ರಾಜಶೇಖರ್ ಇಂದು ವಿಧಿವಶರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ರಾಜಶೇಖರ್, ಇಂದು [ಸೋಮವಾರ] ಸಂಜೆ ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದರು.

ಸ್ಯಾಂಡಲ್​ವುಡ್ ನ ಸೃಜನಶೀಲ ನಿರ್ದೇಶಕ ಅಂತಲೇ ಕರೆಸಿಕೊಂಡಿದ್ದ ಎಂ.ಎಸ್​. ರಾಜಶೇಖರ್ ಅವರು 30ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ರಾಜ್​ಶೇಖರ್ ನಿರ್ದೇಶನದ ಬಹುತೇಕ ಸಿನಿಮಾಗಳು ಸಕ್ಸಸ್​ ಕಂಡಿವೆ. ರಥಸಪ್ತಮಿ, ಮನಮೆಚ್ಚಿದ ಹುಡುಗಿ, ನಂಜುಂಡಿ ಕಲ್ಯಾಣ, ಹೃದಯ ಹಾಡಿತು, ಮಣ್ಣಿನ ದೋಣಿ, ಡಕೋಟ ಎಕ್ಸ್​ಪ್ರೆಸ್​.. ರಾಜ್​ಶೇಖರ್ ನಿರ್ದೇಶನದಲ್ಲಿ ಮೂಡಿ ಬಂದಿವೆ.