ಆದಾಯ ತೆರಿಗೆ ಇಲಾಖೆ ದಾಳಿಗೆ ಗುರಿಯಾಗಿದ್ದ ನಟ ಯಶ್ ವಿಚಾರಣೆಗೆ ಹಾಜರಾಗಿ ವಿವರಣೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿ ಹಲವಾರು ಸಂಗತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು[ಜ.11] ಆದಾಯ ತೆರಿಗೆ ವಿಚಾರಣೆ ಮುಗಿಸಿ ಹೊರ ಬಂದ ನಟ ಯಶ್‌ ಮಾಧ್ಯಮಗಳಿಗೆ ಪ್ರಶ್ನೆ ಎಸೆದಿದ್ದಾರೆ. ‘ನನಗೆ 40 ಕೋಟಿ ಸಾಲ ಯಾಕೆ ಕೊಡುತ್ತಾರೆ. ನನ್ನ ಪ್ರಕಾರ ನನಗೆ 15 ರಿಂದ 16 ಕೋಟಿ ಲೋನ್ ಇದೆ. 15-16 ಕೋಟಿ ಲೋನ್ ಕೊಡಬೇಕಾದರೆ, ತೆರಿಗೆ ಎಷ್ಟಿರಬೇಕು? ದಾಖಲೆ ಎಷ್ಟು ನೀಡಬೇಕು? ಎಂದು ಕೇಳಿದ್ದಾರೆ.

Add Asianetnews Kannada as a Preferred SourcegooglePreferred

ದಾಳಿ ವೇಳೆ ಯಶ್ ಮನೆಯಲ್ಲಿ 6.76 ಕೆಜಿ ಚಿನ್ನ ಪತ್ತೆಯಾಗಿತ್ತು. ರಾಧಿಕ ಪಂಡಿತ್ ಕುಟುಂಬದ ಹೆಸರಲ್ಲಿ ಯಶ್ ಆಸ್ತಿ ಖರೀದಿ ಮಾಡಿದ್ದರು. ಆದರೆ ಈಗ ಚಿನ್ನದ ಮಾಹಿತಿ ಕೇಳಿದಾಗ ಉಡುಗೊರೆ ಯಶ್ ಉಡುಗೊರೆ ಲೆಕ್ಕ ನೀಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಜಯಣ್ಣ, ಯಶ್ ಇಬ್ಬರಿಗು ಆಡಿಟರ್ ಆಗಿರುವ ಬಸವರಾಜ್ ಅವರ ಮೇಲೆ ದಾಳಿ ಮಾಡಿ ಅಧಿಕಾರಿಗಳು ಮತ್ತಷ್ಟು ಮಾಹಿತಿ ಪಡೆದುಕೊಂಡಿದ್ದಾರೆ.

ಇಂಥ ಕೆಲಸ ಮಾಡ್ಕೊಂಡ್ರೆ ನಾನಂತೂ ಬರಲ್ಲ.. ಯಶ್‌ ಬೇಸರಕ್ಕೆ ಕಾರಣವೇನು?

 ಇವೆಲ್ಲ ಇಂದಿಗೆ ಮುಗಿಯುವ ತನಿಖೆಯಲ್ಲ. ಐಟಿ ವಿಚಾರಣೆ ಇನ್ನೂ ಎರಡು ವರ್ಷಗಳ ಕಾಲ ನಡೆಯಲಿದ್ದು, ಅಧಿಕಾರಿಗಳು ಕರೆದಾಗೆಲೆಲ್ಲ ವಿಚಾರಣೆಗೆ ಹಾಜರಾಗುತ್ತೇವೆ. ಐಟಿ ದಾಳಿ ವೇಳೆ ಮನೆಯಲ್ಲಿ ಏನು ಸಿಕ್ಕಿದೆ ಎಂದು ಅಧಿಕಾರಿಗಳಿಗೆ ಗೊತ್ತು. ಕೆಲ ಮಾಧ್ಯಮಗಳು ಗಾಳಿ ಸುದ್ದಿ ಹರಡುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಜನರ ಕಣ್ಣು ತಪ್ಪಿಸಿ ಏನು ಮಾಡಲು ಸಾಧ್ಯ. ಐಟಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದ್ದೇನೆ ಮುಂದೆ ಸಹ ಅಧಿಕಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ತಿಳಿಸಿದರು.