ರಾಷ್ಟ್ರ ರಾಜಕಾರಣಕ್ಕೆ ತೆರಳ್ತಾರ ಸತೀಶ್ ಜಾರಕಿಹೊಳಿ?
ಸದ್ಯ ರಾಜ್ಯ ರಾಜಕಾರಣದಲ್ಲಿ ಇರುವ ಸತಿಶ್ ಜಾರಕಿಹೊಳಿ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಲಿದ್ದಾರ ಎನ್ನುವ ವಿಚಾರಕ್ಕೆ ಇದೀಗ ಅವರೇ ಸ್ಪಷ್ಟನೆ ನೀಡಿದ್ದಾರೆ.
ಲೋಕಾಪುರ (ಬಾಗಲಕೋಟೆ): ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಸ್ಪರ್ಧಿಸುವುದು ಖಚಿತ. ಈ ಕುರಿತು ಮಾತುಕತೆ ನಡೆದಿದ್ದು, ಕ್ಷೇತ್ರ ಮಾತ್ರ ಅಂತಿಮಗೊಳ್ಳಬೇ ಕೆಂದು ಕಳೆದ ವಾರವಷ್ಟೇ ಸತೀಶ್ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಹೇಳಿದ್ದರು.
ಈ ಕುರಿತು ಪ್ರತಿ ಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಅವಶ್ಯಕತೆ ಇಲ್ಲ. ರಾಜ್ಯ ರಾಜಕಾರಣಕ್ಕೆ ಅಷ್ಟೇ ಸೀಮಿತನಾಗಿರುತ್ತೇನೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಇದರೊಂದಿಗೆ ಸಹೋದರರ ನಡುವೆ ಭಿನ್ನಾಭಿಪ್ರಾಯ ಮತ್ತೊಮ್ಮೆ ಬೀದಿಗೆ ಬಂದಿದೆ.