ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಅಂಗೀಕಾರ| ಟ್ವೀಟ್ ಮೂಲಕ ಸಂತಸ ಹಂಚಿಕೊಂಡ ಪ್ರಧಾನಿ ಮೋದಿ| ‘ಮಧ್ಯಮ ಯುಗದ ಕ್ರೂರ ಪದ್ದತಿಗೆ ಇಂದು ಇತೀಶ್ರಿ’| ಐತಿಹಾಸಿಕ ತಪ್ಪನ್ನು ಸರಿಪಡಿಸಲಾಗಿದೆ ಎಂದ ಪ್ರಧಾನಿ| ಮಸೂದೆ ಬೆಂಬಲಿಸಿದ ರಾಜಕೀಯ ಪಕ್ಷಗಳಿಗೆ ಮತ್ತು ಸಂಸದರಿಗೆ ಧನ್ಯವಾದ ಸಲ್ಲಿಸಿದ ಪ್ರಧಾನಿ ಮೋದಿ| 

ನವದೆಹಲಿ(ಜು.30): ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ಮಸೂದೆಗೆ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ, ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
Scroll to load tweet…

ಮಧ್ಯಮ ಯುಗದ ಕ್ರೂರ ಪದ್ದತಿಗೆ ಇಂದು ಇತಿಶ್ರೀ ಹಾಡಲಾಗಿದ್ದು, ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

Scroll to load tweet…

ಮುಸ್ಲಿಂ ಮಹಿಳೆಯರ ಮೇಲೆ ನಡೆಸಲಾಗುತ್ತಿದ್ದ ಐತಿಹಾಸಿಕ ದೌರ್ಜನ್ಯಕ್ಕೆ ಇಂದು ತೆರೆ ಬಿದ್ದಿದ್ದು, ಭಾರತ ಇಂದು ಸಂತೋಷವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.

Scroll to load tweet…

ಇದೇ ವೇಳೆ ತ್ರಿವಳಿ ತಲಾಖ್ ನಿಷೇಧ ಮಸೂದೆ ಬೆಂಬಲಿಸಿದ ಎಲ್ಲಾ ರಾಜಕೀಯ ಪಕ್ಷಗಳಿಗೆ ಮತ್ತು ಸಂಸದರಿಗೆ ಪ್ರಧಾನಿ ಮೋದಿ ಧನ್ಯವಾದ ಸಲ್ಲಿಸಿದ್ದಾರೆ.

Scroll to load tweet…