ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ23 ಯೋಧರ ಸಾಲವನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌ ಮನ್ನಾ ಮಾಡಿದೆ

ಮುಂಬೈ[ಫೆ.19]: ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ23 ಯೋಧರ ಸಾಲವನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌ ಮನ್ನಾ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಾಳಿಯಲ್ಲಿ ಮೃತಪಟ್ಟಸಿಆರ್‌ಪಿಎಫ್‌ನ 23 ಮಂದಿ ಯೋಧರು ಎಸ್‌ಬಿಐನಿಂದ ಸಾಲ ಪಡೆದುಕೊಂಡಿದ್ದರು. ಅವರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ನಿರ್ಧರಿಸಲಾಗಿದೆ ಎಂದು ಬ್ಯಾಂಕ್‌ನ ಪ್ರಕಟಣೆ ತಿಳಿಸಿದೆ.

ಎಲ್ಲಾ ಸಿಆರ್‌ಪಿಎಫ್‌ ಯೋಧರು ಎಸ್‌ಬಿಐನಲ್ಲಿ ವೇತನ ಖಾತೆಯನ್ನು ಹೊಂದಿದ್ದು, ಪ್ರತಿ ಯೋಧರಿಗೆ 30 ಲಕ್ಷ ರು. ವರೆಗೂ ವಿಮೆಗೆ ಒಳಪಟ್ಟಿದ್ದಾರೆ. ಹುತಾತ್ಮ ಯೋಧರ ಕುಟುಂಬ ಸದಸ್ಯರಿಗೆ ವಿಮಾ ಹಣವನ್ನು ಪಾವತಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಸ್‌ಬಿಐ ತಿಳಿಸಿದೆ.