ಕೃಷ್ಣಮೃಗ ಬೇಟೆ ಪ್ರಕರಣದ ಸುದೀರ್ಘ ವಿಚಾರಣೆಯ ಬಳಿಕ ರಾಜಸ್ಥಾನ ಹೈಕೋರ್ಟ್ ನಟ ಸಲ್ಮಾನ್ ಖಾನ್’ಗೆ ಕ್ಲೀನ್ ಚಿಟ್ ನೀಡಿತ್ತು, ಅದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್’ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.

ನವದೆಹಲಿ (ನ.11): ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಲ್ಮಾನ್​​ ಖಾನ್​ ವಿರುದ್ಧ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

1998ರಲ್ಲಿ ಜೋಧಪುರ ವ್ಯಾಪ್ತಿಯಲ್ಲಿ ‘ಹಮ್​​ ಸಾಥ್​ ಸಾಥ್​ ಹೈ’ ಚಿತ್ರದ ಶೂಟಿಂಗ್​ ವೇಳೆ ಸಲ್ಮಾನ್ ಖಾನ್ ಕೃಷ್ಣಮೃಗವನ್ನು ಕೊಂದಿದ್ದರು ಎಂಬ ಆರೋಪ ಹೊರಿಸಲಾಗಿತ್ತು.

ಪ್ರಕರಣದ ಸುದೀರ್ಘ ವಿಚಾರಣೆಯ ಬಳಿಕ ರಾಜಸ್ಥಾನ ಹೈಕೋರ್ಟ್ ನಟ ಸಲ್ಮಾನ್ ಖಾನ್’ಗೆ ಕ್ಲೀನ್ ಚಿಟ್ ನೀಡಿತ್ತು ಅದನ್ನು ಪ್ರಶ್ನಿಸಿ ರಾಜಸ್ಥಾನ ಸರ್ಕಾರ ಸುಪ್ರೀಂ ಕೋರ್ಟ್’ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು.