ಏ. 30ರೊಳಗೆ ಮಾನವ ಹಕ್ಕು ಆಯೋಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ: ಕೇಂದ್ರಕ್ಕೆ ಸುಪ್ರೀಂ ಗಡುವು
ಸಾಮಾಜಿಕಕ ಕಾರ್ಯಕರ್ತ ಹಾಗೂ ಸುಪ್ರೀಂ ಕೋರ್ಟ್ ವಕೀಲ ರಾಧಕಾಂತ ತ್ರಿಪಾಠಿ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಈ ಆದೇಶವನ್ನು ಹೊರಡಿಸಿದೆ.
ನವದೆಹಲಿ (ಫೆ.27): ರಾಷ್ಟ್ರೀಯ ಮಾನವ ಹಕ್ಕು ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಏಪ್ರಿಲ್ 30ರೊಳಗೆ ಭರ್ತಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಸಾಮಾಜಿಕಕ ಕಾರ್ಯಕರ್ತ ಹಾಗೂ ಸುಪ್ರೀಂ ಕೋರ್ಟ್ ವಕೀಲ ರಾಧಕಾಂತ ತ್ರಿಪಾಠಿ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಜಗದೀಶ್ ಸಿಂಗ್ ಖೆಹರ್ ನೇತೃತ್ವದ ಪೀಠ ಈ ಆದೇಶವನ್ನು ಹೊರಡಿಸಿದೆ.
ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಖಾಲಿಯಿರುವ ಮಹಾ ನಿರ್ದೇಶಕರ ಹುದ್ದೆಯನ್ನು ಒಂದು ವಾರದೊಳಗೆ ಭರ್ತಿ ಮಾಡುವಂತೆ ಸೂಚಸಿ ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.