ಕಂಬಳ ನಿಷೇಧ ಹೋರಾಟಕ್ಕೆ ಪೇಟಾಗೆ ಹಿನ್ನಡೆ
ಕಂಬಳ ಪರವಾದ ಮಸೂದೆಗೆ ರಾಷ್ಟ್ರಪತಿಗಳ ಅನುಮತಿ ಹಿನ್ನಲೆಯಲ್ಲಿ ಸುಪ್ರಿಂ ಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು.
ನವದೆಹಲಿ(ಮಾ.12): ಕಂಬಳ ನಿಷೇಧಿಸಬೇಕೆಂಬ ಪೆಟಾ ಹೋರಾಟಕ್ಕೆ ಹಿನ್ನಡೆಯಾಗಿದೆ.
ಪೆಟಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು ಹೋರಾಟಕ್ಕೆ ಹಿನ್ನಡೆಯಾಗಿದೆ. ಕಂಬಳ ಪರವಾದ ಮಸೂದೆಗೆ ರಾಷ್ಟ್ರಪತಿಗಳ ಅನುಮತಿ ಹಿನ್ನಲೆಯಲ್ಲಿ ಸುಪ್ರಿಂ ಕೋರ್ಟ್'ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ವಜಾಗೊಳಿಸಲಾಗಿದ್ದು, ಬೇಕಿದ್ದರೆ ಹೊಸ ಕಾನೂನನ್ನು ಪ್ರಶ್ನಿಸಿ ಮನವಿ ಸಲ್ಲಿಸಿ ಎಂದು ಪೆಟಾಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.