ಸುಬ್ರತಾ ರಾಯ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
ಸಹಾರ ಕಂಪನಿಯ ಮುಖ್ಯಸ್ಥ ಸುಬ್ರತಾ ರಾಯ್ ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಅವರ ಮಧ್ಯಾಂತರ ಜಾಮೀನು ಅವಧಿಯನ್ನು ವಿಸ್ತರಿಸಿದೆ.
ನವದೆಹಲಿ (ನ.28): ಸಹಾರ ಕಂಪನಿಯ ಮುಖ್ಯಸ್ಥ ಸುಬ್ರತಾ ರಾಯ್ ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಅವರ ಮಧ್ಯಾಂತರ ಜಾಮೀನು ಅವಧಿಯನ್ನು ವಿಸ್ತರಿಸಿದೆ.
ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿಗೆ (ಸೆಬಿ) ಫೆ.06 2017 ರೊಳಗೆ ರೂ.600 ಕೋಟಿಯನ್ನು ಪಾವತಿಸುವಂತೆ ಸುಪ್ರೀಂ ಆದೇಶಿಸಿದೆ.
ಸುಬ್ರತಾ ರಾಯ್ ಪರ ವಕೀಲ ಕಪಿಲ್ ಸಿಬಲ್, ಮುಖ್ಯ ನ್ಯಾ. ಟಿ.ಎಸ್ ಠಾಕೂರ್ ನೇತೃತ್ವದ ತ್ರಿ ಸದಸ್ಯ ನ್ಯಾಯಪೀಠದೆದುರು ಪ್ರಸ್ತಾವನೆ ಸಲ್ಲಿಸಿ ಎರಡೂವರೆ ವರ್ಷದೊಳಗೆ ರೂ. 11000 ಕೋಟಿಯನ್ನು ಪಾವತಿಸುವುದಾಗಿ ಹೇಳಿದರು.
“ನೀವು 1 ಲಕ್ಷ 87 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದೀರಿ. ಆದರೆ ಇನ್ನೂ ಸಹ ನಿಮಗೆ ಹಣವನ್ನು ಪಾವತಿ ಮಾಡಲು ಸಾಧ್ಯವಾಗಿಲ್ಲ” ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.