ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರ ಗಡೀಪಾರು ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ನವದೆಹಲಿ: ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರ ಗಡೀಪಾರು ವಿಳಂಬವಾಗುತ್ತಿರುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

Add Asianetnews Kannada as a Preferred SourcegooglePreferred

‘ಏನಿದು ನಿಮ್ಮ ವರ್ತನೆ? ಸುಪ್ರೀಂ ಕೋರ್ಟ್ ಆದೇಶಕ್ಕೂ ನೀವು ಕಿಮ್ಮತ್ತು ನೀಡುವುದಿಲ್ಲವೆ? ನಾವು ಈಗಾಗಲೇ ವಿದೇಶಾಂಗ ಸಚಿವಾಲಯದ ಅಧಿಕಾರಿಗಳಿಗೆ ಸಾಕಷ್ಟು ಎಚ್ಚರಿಕೆ ನೀಡಿದ್ದೇವೆ.

8 ತಿಂಗಳಿಂದ ಸೂಚನೆ ನೀಡುತ್ತಲೇ ಇದ್ದೇವೆ. ಆದರೂ ಈ ಬಗ್ಗೆ ಕ್ರಮ ಜರುಗಿಸುತ್ತಿಲ್ಲ’ ಎಂದು ನ್ಯಾ| ಅರುಣ್ ಮಿಶ್ರಾ ಅವರ ಪೀಠ ಕಿಡಿಕಾರಿತು. ‘ವಿದೇಶದಲ್ಲಿರುವ

ಈ ಇಬ್ಬರು ಆರೋಪಿಗಳನ್ನು ಭಾರತಕ್ಕೆ ಕರೆತರಲು ಆಗುತ್ತದೆಯೇ ಇಲ್ಲವೇ ಹೇಳಿಬಿಡಿ. ಏಕೆ ನೀವು ಆದೇಶ ಪಾಲಿಸುತ್ತಿಲ್ಲ?’ ಎಂದೂ ಒಂದು ಹಂತದಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳನ್ನು ಕೋರ್ಟ್ ಪ್ರಶ್ನಿಸಿತು.

ಜೊತೆಗೆ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿದ ಅವರು, ಗಡೀಪಾರು ಪ್ರಕ್ರಿಯೆಯ ಔಪಚಾರಿಕತೆಗಳನ್ನು ಅಷ್ಟರೊಳಗೆ ಮುಗಿಸಬೇಕೆಂದು ಸೂಚಿಸಿದರು.