ದಲಿತರ ಆಕ್ರೋಶ ತಣಿಸ್ತಾರಾ ಮೋದಿ?
ಎಸ್ಸಿ ಎಸ್ಟಿ ಕಾಯ್ದೆ ಮಾರ್ಪಾಡಿಗೆ ಬ್ರೇಕ್?
ಸುಪ್ರೀಂ ಆದೇಶ ಧಿಕ್ಕರಿಸತ್ತಾ ಕೇಂದ್ರ ಸರ್ಕಾರ?
ಹೊಸ ಮಸೂದೆ ಮಂಡಿಸಲು ಸಜ್ಜಾದ ಕೇಂದ್ರ
ದಲಿತ ಓಟ್ ಬ್ಯಾಂಕ್ ಉಳಿಸಿಕೊಳ್ತಾರಾ ಮೋದಿ?
ಬೆಂಗಳೂರು(ಆ.3): ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದ ಎಸ್ಸಿ ಎಸ್ಟಿ ಕಾಯ್ದೆ ತಿದ್ದುಪಡಿ ವಿಚಾರ, ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ನು ಮೂಲ ಸ್ವರೂಪದಲ್ಲಿ ಉಳಿಸಿಕೊಳ್ಳುವುದಕ್ಕೆ ಒಂದು ವಿಧೇಯಕವನ್ನು ಕೇಂದ್ರ ಸರ್ಕಾರ ಇದೇ ಅಧಿವೇಶನದಲ್ಲಿ ಮಂಡಿಸಲು ಸಜ್ಜಾಗಿದೆ.
ಆದರೆ ಸುಪ್ರೀಂಕೋರ್ಟ್ ಅಟ್ರಾಸಿಟಿ ಕಾಯ್ದೆಯ ದುರ್ಬಳಕೆ ತಡೆಗಟ್ಟಲು ಈ ಕಾಯ್ದೆಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲು ಸೂಚಿಸಿತ್ತು. ಇದರಿಂದ ಭುಗಿಲೆದ್ದ ಆಕ್ರೋಶವನ್ನು ತಣಿಸಲು ಸುಪ್ರೀಂ ಆದೇಶವನ್ನು ಧಿಕ್ಕರಿಸುವ ನಿರ್ಣಯಕ್ಕೆ ಕೇಂದ್ರ ಬಂದಿದೆ.
ಈ ಕುರಿತು ನಿಮ್ಮ ಸುವರ್ಣನ್ಯೂಸ್ ನ ಲೆಫ್ಟ್ ರೈಟ್ ಆ್ಯಂಡ್ ಸೆಂಟರ್ ನಲ್ಲಿ ನಡೆದ ಚರ್ಚೆಯ ಸಂಪೂರ್ಣ ವಿವರ ಇಲ್ಲಿದೆ..