ಲಂಡನ್’ನಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯರವರನ್ನು ಕೇಂದ್ರ ಸರ್ಕಾರ ಕೋರ್ಟ್’ನಲ್ಲಿ ಹಾಜರುಪಡಿಸುವವರೆಗೆ ಅವರ ಜೈಲುಶಿಕ್ಷೆಯನ್ನು ನಿರ್ಧರಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ.

ನವದೆಹಲಿ (ಜು.14): ಲಂಡನ್’ನಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯರವರನ್ನು ಕೇಂದ್ರ ಸರ್ಕಾರ ಕೋರ್ಟ್’ನಲ್ಲಿ ಹಾಜರುಪಡಿಸುವವರೆಗೆ ಅವರ ಜೈಲುಶಿಕ್ಷೆಯನ್ನು ನಿರ್ಧರಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ.

Add Asianetnews Kannada as a Preferred SourcegooglePreferred

ಕೇಂದ್ರ ಸರ್ಕಾರವು ಉದ್ಯಮಿ ವಿಜಯ್ ಮಲ್ಯರವರನ್ನು ನ್ಯಾಯಾಂಗದಲ್ಲಿ ಹಾಜರುಪಡಿಸಲು ವಿಫಲವಾದ ಹಿನ್ನಲೆಯಲ್ಲಿ ಮಲ್ಯರವರ ಮೇಲಿರುವ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಂದೂಡಲಾಗಿದೆ. ಅವರನ್ನು ನ್ಯಾಯಾಂಗಕ್ಕೆ ಹಾಜರುಪಡಿಸಿದ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.