ಕಾರ್ಮಿಕ ಸಂಘಟನೆಗಳು 2 ದಿನಗಳ ಕಾಲ ಭಾರತ್ ಬಂದ್ ಗೆ ಕರೆ ನೀಡಿದ್ದು ಈ ನಿಟ್ಟಿನಲ್ಲಿ ಶಾಲಾ ಕಾಲ ರಜೆ ನೀಡಲಾಗುತ್ತಿದೆ.

ಬೆಂಗಳೂರು: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ರಾಜ್ಯದಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಯಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜನವರಿ 8 ಹಾಗೂ 9ರ ಭಾರತ್ ಬಂದ್‌ಗೆ ಕರೆ ನೀಡಿದ್ದು, ಮಕ್ಕಳ ಭದ್ರತೆ ಮತ್ತು ರಕ್ಷಣೆ ದೃಷ್ಟಿಯಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : ನಾಳೆ, ನಾಡಿದ್ದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ರಾಜ್ಯದಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸುವರ್ಣನ್ಯೂಸ್.ಕಾಮ್ ಗೆ ಪ್ರೈವೇಟ್ ಸ್ಕೂಲ್ ಅಸೋಸಿಯೇಷನ್ ನ ಶಶಿಕುಮಾರ್ ಹೇಳಿದ್ದಾರೆ.

 ಮಕ್ಕಳ ಸುರಕ್ಷತೆ ಮತ್ತು ಅನಾನುಕೂಲ ಎದುರಾಗಲಿದೆ. ಈ ನಿಟ್ಟಿನಲ್ಲಿ ರಜೆ ನೀಡಲಾಗುತ್ತದೆ ಎಂದಿದ್ದಾರೆ.