ಮತ್ತೆ ಅಯ್ಯಪ್ಪನ ಸನ್ನಿಧಾನದಲ್ಲಿ ನಿಷೇಧಾಜ್ಞೆ ಜಾರಿ
ನಿತ್ಯ ಪೂಜೆಯ ನಿಟ್ಟಿನಲ್ಲಿ ಶಬರಿಮಲೆ ಅಯ್ಯಪ್ಪ ಸನ್ನಿಧಾನದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಮತ್ತೊಮ್ಮೆ ಗಲಭೆ ನಡೆಯುವ ಸಾಧ್ಯತೆ ನಡೆಯಬಹುದಾದ ನಿಟ್ಟಿನಲ್ಲಿ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಶಬರಿಮಲೆ : ಇನ್ನೆರಡು ದಿನಗಳಲ್ಲಿ ಶಬರಿಮಲೆ ದೇಗುಲವನ್ನು ಪೂಜಾ ಕಾರ್ಯಕ್ಕೆ ತೆರೆಯಲಿದ್ದು ಈ ನಿಟ್ಟಿನಲ್ಲಿ ಸೂಕ್ತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 50 ಕಿ.ಮೀ ದೂರದವರೆಗೂ ಕೂಡ ಕಟ್ಟೆಚ್ಚರ ವಹಿಸಲಾಗುತ್ತಿದೆ.
ನವೆಂಬರ್ 5 ರಂದು ದಿನದ ಪೂಜೆ ಹಿನ್ನೆಲೆಯಲ್ಲಿ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತಿದೆ. ಜಿಲ್ಲಾಡಳಿತದಿಂದ ನೆಲವುಂಗಲ್, ಪಂಪಾ, ನಿಲಕ್ಕಲ್, ಸನ್ನಿದಾನಮ್ ಪ್ರದೇಶದ ಬಳಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಸ್ಥಳದಲ್ಲಿ ಶಾಂತಿ ಸುವ್ಯವಸ್ಥೆ, ಭದ್ರತೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಈ ಸ್ಥಳದಲ್ಲಿ ವಿಶೆಷ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ.
ಕಳೆದ ಅಕ್ಟೋಬರ್ 17ರಂದು ದೇವಾಲಯವನ್ನು ನಿತ್ಯದ ಪೂಜೆ ಹಿನ್ನೆಲೆಯಲ್ಲಿ ತೆರೆದಿದ್ದ ಸಾಕಷ್ಟು ಪ್ರಮಾಣದಲ್ಲಿ ಗಲಭೆಗಳು ನಡೆದಿದ್ದವು. ಮಹಿಳೆಯರು ಪ್ರವೇಶಕ್ಕೆ ಯತ್ನಿಸಿದ್ದು, ಪ್ರತಿಭಟನೆಯನ್ನು ನಡೆಸಲಾಗಿತ್ತು.