Asianet Suvarna News Asianet Suvarna News

ಚುನಾವಣೆಯಲ್ಲಿ ಅಮಿತ್ ಕೇವಲ 10ರ ಗೆಲುವಿನ ಚಿಂತೆಯಲ್ಲಿದ್ದಾರಾ ?

  • ಉತ್ತರದಲ್ಲಿ ಸೀಟುಗಳು ಕಡಿಮೆಯಾದರೆ ಬೇರೆ ರಾಜ್ಯಗಳತ್ತ ಅಮಿತ್ ಶಾ ಚಿತ್ತ 
  • ಸೋರುತ್ತಿರುವ ಬಿಜೆಪಿಯ ಹೊಸ ಕಚೇರಿ 
Selected Part of july 24th Prashanth Natu Column  Part 4
Author
Bengaluru, First Published Jul 24, 2018, 2:41 PM IST

ಉತ್ತರದಲ್ಲಿ ಸೀಟು ಕಡಿಮೆ ಆದಾವು ಎಂಬ ಆತಂಕದಲ್ಲಿರುವ ಅಮಿತ್ ಶಾ ಪೂರ್ವದತ್ತ ದೃಷ್ಟಿ ಹರಿಸಿದ್ದು, ತಿಂಗಳಿಗೆ 4 ದಿನ ಪಶ್ಚಿಮ ಬಂಗಾಳಕ್ಕೆ ಹೋಗಲಿದ್ದಾರೆ. ಮಮತಾ ವಿರುದ್ಧ ಹೋರಾಟ ತೀವ್ರಗೊಳಿಸಿದರೆ ಕನಿಷ್ಠ 10 ಸೀಟ್ ಬಂದಾವು ಎಂಬ ಎಣಿಕೆಯಲ್ಲಿರುವ ಶಾ, ಒರಿಸ್ಸಾದಲ್ಲಿ ಮಾತ್ರ ನವೀನ್ ಪಟ್ನಾಯಕ್‌ರ ಬಿಜು ಜನತಾದಳ ಜತೆ ಮೈತ್ರಿಗೆ ಪ್ರಯತ್ನ ನಡೆಸಿದ್ದಾರೆ. ಅಂದ ಹಾಗೆ ಅವಿಶ್ವಾಸ ಗೊತ್ತುವಳಿ ಹಿಂದಿನ ರಾತ್ರಿ ಮೋದಿ ನವೀನ್ ಪಟ್ನಾಯಕ್ ರ ತಂಗಿ ಗೀತಾ ಮೆಹತಾರನ್ನು ಊಟಕ್ಕೆ ಮನೆಗೆ ಕರೆದಿದ್ದರಂತೆ.

ಸೋರುತಿಹುದು ಮಾಳಿಗೆ
ಮಿಂಟೋ ರೋಡ್‌ನಲ್ಲಿ ಬಿಜೆಪಿ ಹೊಸದಾಗಿ ಕಟ್ಟಿರುವ ಬಹು ಮಹಡಿ ಕಟ್ಟಡ ಮಾನ್ಸೂನ್‌ನ ಮೊದಲ ಮಳೆಗೇ ಸೋರಲು ಆರಂಭಿಸಿತ್ತು. ಮೆಟ್ಟಿಲುಗಳ ಮೇಲೆ ನೀರು ಹರಿದು ಬರಲು ಆರಂಭಿಸಿದಾಗ ಸಿಬ್ಬಂದಿ ನೀರು ಹೊರಗೆ ಹಾಕಲು ಹರಸಾಹಸ ಪಡಬೇಕಾಯಿತು. ಹೊಸ ಕಟ್ಟಡ ಉದ್ಘಾಟನೆಯಾಗಿ ಇನ್ನೂ ಒಂದು ವರ್ಷವೂ ಕಳೆದಿಲ್ಲ. ಮಾಳಿಗೆ ಸೋರಿದರೆ ಚಿಂತೆಯಿಲ್ಲ ಬಿಡಿ, ಲೋಕಸಭೆ ಎಲೆಕ್ಷನ್‌ನಲ್ಲಿ ಮತಗಳು ಸೋರಿ ಹೋಗಬಾರದಷ್ಟೆ.

(ಪ್ರಶಾಂತ್ ನಾತು ಅಂಕಣದ ಆಯ್ದ ಭಾಗ)

Follow Us:
Download App:
  • android
  • ios