ಉತ್ತರ ಪ್ರದೇಶದಲ್ಲಿ ತಾರಕ್ಕೇರಿದ ಸಿಎಂ, ಡಿಸಿಎಂ ಜಗಳ ಅಮಿತ್ ಶಾ ಕೂಡ ಯೋಗಿ ಆಡಳಿತ ವೈಖರಿಯಿಂದ ಬೇಸರ 

ಉತ್ತರ ಪ್ರದೇಶದಲ್ಲಿ ಉಪಚುನಾವಣೆಗಳಲ್ಲಿ ಬಿಜೆಪಿ ಸೋತ ನಂತರ ಆಂತರಿಕ ಜಗಳ ಆರಂಭ ಆಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ನಡುವೆ ಜಗಳ ತಾರಕಕ್ಕೆ ಏರಿದೆ. ಉಪ ಮುಖ್ಯಮಂತ್ರಿಗೆ ಸೇರಿದ ಫೈಲ್ ಗಳನ್ನು ಮುಖ್ಯಮಂತ್ರಿ ಯೋಗಿ ಇಟ್ಟುಕೊಂಡು ಕೂರುತ್ತಾರೆ ಎಂಬ ಚರ್ಚೆ ಜೋರಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಮಿತ್ ಶಾ ಕೂಡ ಯೋಗಿ ಆಡಳಿತ ವೈಖರಿಯಿಂದ ಖುಷ್ ಇಲ್ಲವಂತೆ. ಗೋರಖ್‌ಪುರದ ಪೀಠದ ಮಹಾಂತರಾಗಿರುವ ಯೋಗಿಗೆ ಆದೇಶ ಕೊಟ್ಟು ಗೊತ್ತೇ ವಿನಃ ಉಳಿದವರು ಹೇಳಿದ್ದನ್ನು ಕೇಳಿಸಿಕೊಳ್ಳುವ ರೂಢಿಯೂ ಇಲ್ಲ, ವ್ಯವಧಾನವೂ ಇಲ್ಲವಂತೆ.

[ಕನ್ನಡಪ್ರಭ - ಪ್ರಶಾಂತ್ ನಾತೂ ಅವರ ಅಂಕಣದ ಆಯ್ದ ಭಾಗ ]

ಇ ಪೇಪರ್ ನಲ್ಲೂ ಓದಿ : ತಾರಕಕ್ಕೇರಿದ ಸಿಎಂ ಹಾಗೂ ಡೆಪ್ಯುಟಿ ಸಿಎಂ ಜಗಳ