ಇಸ್ಲಾಮಾಬಾದ್(ಅ.3): ಮೊನ್ನೆ ಮೊನ್ನೆ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದ ಕ್ರಿಕೆಟಿಗ ಶಾಹಿದ್ ಆಫ್ರಿದಿ ಈಗ ಉಲ್ಟಾ ಹೊಡೆದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ. ಕ್ರಿಕೆಟ್ ಶೋವೊಂದರಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಆಫ್ರಿದಿ ಪಠಾಣರು ಪಾಕಿಸ್ತಾನದ ಗಡಿ ಕಾಯುತ್ತಿದ್ದಾರೆ ಎಂಬುದನ್ನು ಭಾರತ ಮರೆತಂತಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ನಮ್ಮೆಲ್ಲಾ ಗಡಿಗಳು ಪಾಕ್ ಸೇನಾ ಪಡೆಗಳಿಂದ ಸುರಕ್ಷಿತವಾಗಿವೆ ಎಂದು ಆಫ್ರಿದಿ ಹೇಳಿದ್ದಾರೆ. ಭಾರತದ ಸರ್ಜಿಕಲ್ ದಾಳಿ ಬಳಿಕ ಸರಣಿ ಟ್ವೀಟ್ ಮಾಡಿದ್ದ ಆಫ್ರಿದಿ, ಏಷ್ಯಾದ ಎರಡು ಬಲಿಷ್ಠ ರಾಷ್ಟ್ರಗಳು ಶಾಂತಿ ಕಾಪಾಡಬೇಕು. ಅಲ್ಲದೆ ಪಾಕ್ ಯಾವಾಗಲೂ ಶಾಂತಿ ಬಯಸುವ ರಾಷ್ಟ್ರ ಎಂದು ಹೇಳಿದ್ದರು. ಆದರೆ ಇದ್ದಕ್ಕಿದ್ದಂತೆ ಶಾಹಿದ್ ಆಫ್ರಿದಿ ಉಲ್ಟಾ ಹೊಡೆದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬರಿ ನೀವಷ್ಟೆ ಅಲ್ಲ ಪಠಾಣರು ರೆಡಿಯಾಗಿದ್ದಾರೆ: ಭಾರತಕ್ಕೆ ಎಚ್ಚರಿಕೆ ನೀಡಿದ ಆಫ್ರಿದಿ
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos
