Asianet Suvarna News Asianet Suvarna News

ಭಾರತ-ಪಾಕ್ ಯುದ್ಧ ಭೀತಿ: ಪಾಕ್ ಕ್ರಿಕೆಟಿಗ ಅಫ್ರಿದಿ ಹೇಳಿದ್ದೇನು...?

Shahid Afridis Reaction

ದೆಹಲಿ(ಅ.01): ಉರಿ ಸೇನಾ ಕೇಂದ್ರದ ಮೇಲೆ ಪಾಕಿಸ್ಥಾನ ಮೂಲದ ಭಯೋತ್ಪಾದಕರು ದಾಳಿ ನಡೆಸಿ, ಭಾರತೀಯ ಸೈನಿಕರ ಸಾವಿಗೆ ಕಾರಣರಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಪಾಕ್ ಗಡಿಯನ್ನು ದಾಟಿ 30ಕ್ಕೂ ಹೆಚ್ಚು ಉಗ್ರರನ್ನು ಹೊಡೆದು ಉರುಳಿಸಿದರು.

ಈ ಘಟನೆಯಿಂದ ಉಭಯ ದೇಶಗಳ ಗಡಿಯಲ್ಲಿ ಯುದ್ಧ ಭೀತಿ ಉಂಟಾಗಿದ್ದು, ಈ ಹಿನ್ನಲೆಯಲ್ಲಿ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಶಾಂತಿ ಕಾಪಾಡುವಂತೆ ಎರಡು ದೇಶಗಳಲ್ಲಿ ಮನವಿ ಮಾಡಿದ್ದಾರೆ. 

ಭಾರತ-ಪಾಕಿಸ್ತಾನ ನೆರೆ ರಾಷ್ಟ್ರಗಳಾಗಿದ್ದು, ಶಾಂತಿಯನ್ನು ಕಾಪಾಡಬೇಕು ಎಂದು ಟ್ವಿಟ್ಟರ್ ಮೂಲಕ ಶಾಹಿದ್ ಅಫ್ರಿದಿ ಮನವಿ ಮಾಡಿಕೊಂಡಿದ್ದಾರೆ. 

ಉಭಯ ದೇಶಗಳು ಕಾದಾಡುವುದರಿಂದ ಎರಡೂ ದೇಶದ ಮೇಲೂ ಪರಿಣಾಮ ಬೀರಲಿದೆ. ಯುದ್ಧಕ್ಕೆ ಮುಂದಾಗಬೇಡಿ ಎಂದಿದ್ದಾರೆ.
 

 

Latest Videos
Follow Us:
Download App:
  • android
  • ios