ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಬೇಕೆಂಬ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಆಗ್ರಹಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಾಟಾ ಲಿಟರೇಚರ್ ಲೈವ್ ಫೆಸ್ಟಿವಲ್'ನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನ ನಟರನ್ನು ಭಾರತಕ್ಕೆ ಮತ್ತೆ ಆಹ್ವಾನಿಸಬೇಕು. ಇದರಿಂದ ದ್ವಿಪಕ್ಷೀಯ ಸಂಬಂಧಗಳು ಗಟ್ಟಿಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಮುಂಬೈ(ನ.19): ಪಾಕಿಸ್ತಾನ ಕಲಾವಿದರಿಗೆ ಭಾರತದಲ್ಲಿ ನಿಷೇಧ ಹೇರಬೇಕೆಂಬ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಆಗ್ರಹಕ್ಕೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಟಾಟಾ ಲಿಟರೇಚರ್ ಲೈವ್ ಫೆಸ್ಟಿವಲ್'ನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿರುವ ಅವರು, ಪಾಕಿಸ್ತಾನ ನಟರನ್ನು ಭಾರತಕ್ಕೆ ಮತ್ತೆ ಆಹ್ವಾನಿಸಬೇಕು. ಇದರಿಂದ ದ್ವಿಪಕ್ಷೀಯ ಸಂಬಂಧಗಳು ಗಟ್ಟಿಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಪಾಕಿಸ್ತಾನದಲ್ಲಿರುವ ಸೃಜನಶೀಲ ಕಲಾವಿದರು ಹಾಗೂ ಪ್ರಾಮಾಣಿಕ ಉದ್ಯಮಿಗಳನ್ನು ಭಾರತಕ್ಕೆ ಆಹ್ವಾನಿಸಬೇಕಿದೆ. ಪಾಕಿಸ್ತಾನದಿಂದ ಭಾರತಕ್ಕೆ ಬರುವ ಜನರಿಗೆ ತವರಿನಂತಹ ವಾತಾವರಣವನ್ನು ನಿರ್ಮಾಣ ಮಾಡಬೇಕಿದೆ. ಉಭಯ ದೇಶಗಳ ನಡುವಿನ ದ್ವೇಷ ನಮ್ಮ ಮನಃಸ್ಥಿತಿ ಮೂಲಕ ಬದಲಾಗಬೇಕೆ ವಿನಃ ನೀತಿಗಳ ಮೂಲಕವಲ್ಲ ಎಂದಿದ್ದಾರೆ.
