ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ನೋಟು ಅಪನಗದೀಕರಣ ಮತ್ತು ಜಿಎಸ್‌ಟಿ ಕುರಿತು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ ಸಂಸದ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ತೊರೆಯುವ ಸಾಧ್ಯತೆಯಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ನೋಟು ಅಪನಗದೀಕರಣ ಮತ್ತು ಜಿಎಸ್‌ಟಿ ಕುರಿತು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ ಸಂಸದ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ತೊರೆಯುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred

2019ರ ಲೋಕಸಭಾ ಚುನಾವಣೆಗೂ ಮುನ್ನವೇ ಅವರು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಅಥವಾ ಮುಂಬರುವ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು ಎಂದು ವರದಿಗಳು ತಿಳಿಸಿವೆ.

ಈ ಬಗ್ಗೆ ಗುರುವಾರ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಅವರು, ‘2014ರಲ್ಲಿ ಆಡಳಿತ ಹಿಡಿಯುವಲ್ಲಿ ಯಶಸ್ವಿಯಾದ ಬಿಜೆಪಿ ತಮ್ಮನ್ನು ನಡೆಸಿಕೊಂಡ ರೀತಿ ಮತ್ತು ಕೇವಲ 2 ಸೀಟು ಗೆಲ್ಲುವಷ್ಟುಸಾಮರ್ಥ್ಯವಿದ್ದ ಬಿಜೆಪಿ ಮಾಜಿ ಉಪ ಪ್ರಧಾನಿ ಲಾಲ್‌ ಕೃಷ್ಣ ಅಡ್ವಾಣಿ ಅವರ ನಾಯಕತ್ವದಲ್ಲಿ ಸುಮಾರು 200 ಸ್ಥಾನ ಗಳಿಸುವ ಸಾಮರ್ಥ್ಯ ಪಡೆಯಿತು.

ಅಂಥ ನಾಯಕನಿಗೆ ಇಂದು ಬಿಜೆಪಿಯಲ್ಲಿ ಇರುವ ಸ್ಥಾನಮಾನವಾದರೂ ಏನು?,’ ಎಂದು ಆಕ್ರೋಶ ವ್ಯಕ್ತಪಡಿಸಿದರು.