ಬಿಜೆಪಿ ಬೆಂಬಲಕ್ಕೆ ನಿಂತ ಎಸ್ಎಡಿ
ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿರುವ ಹೊರತಾ ಗಿಯೂ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಬಿಜೆಪಿ ಬೆಂಬಲಕ್ಕೆ ನಿಂತಿದೆ.
ಚಂಡೀಗಢ: ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಭಿನ್ನಾಭಿಪ್ರಾಯ ತಲೆದೋರಿರುವ ಹೊರತಾ ಗಿಯೂ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಬಿಜೆಪಿ ಬೆಂಬಲಕ್ಕೆ ನಿಂತಿದೆ.
ತಮ್ಮ ಪಕ್ಷ ಬಿಜೆಪಿ ಜೊತೆ ಶಾಶ್ವತ ವಾಗಿ ಮುಂದುವರಿಯ ಲಿದೆ ಎಂದು ಎಸ್ ಎಡಿ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಗುರುವಾರ ಹೇಳಿದ್ದಾರೆ.
ಇದೇ ವೇಳೆ ಮುಂದಿನ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಪಕ್ಷಗಳು ಒಂದಾಗಬೇಕು ಎಂದು ಬಾದಲ್ ಕರೆ ನೀಡಿದ್ದಾರೆ. ಮೋದಿ ಸರ್ಕಾರದ 4 ವರ್ಷಗಳ ಸಾಧನೆ ವಿವರಿಸಲು ಸುಖ್ಬೀರ್ಸಿಂಗ್ರನ್ನು ಬಿಜೆಪಿ ಅಧ್ಯಕ್ಷ ಶಾ ಭೇಟಿ ಬಳಿಕ ಈ ಹೇಳಿಕೆ ಹೊರಬಿದ್ದಿದೆ.