ಶಿರೂರು ಮಠದ ಸ್ವಾಮೀಜಿ ಅವರು ಅನಾರೋಗ್ಯದಿಂದ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ಉಡುಪಿ: ಉಡುಪಿ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಆರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ.
Add Asianetnews Kannada as a Preferred Source

ಹಠಾತ್ತನೇ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ರೀಗಳ ಹೊಟ್ಟೆಯಲ್ಲಿ ತೀವ್ರ ರಕ್ತಸ್ರಾವವಾ ಗಿದ್ದು, ಆಹಾರದಿಂದಾಗಿ ಹೀಗಾಗಿದೆ ಎಂದು
ವೈದ್ಯರು ತಿಳಿಸಿದ್ದರು.
ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
