ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅಪಾರ ಭಕ್ತ ಗಣವನ್ನು ಬಿಟ್ಟು ನಡೆದಿದ್ದಾರೆ.  ಆದರೆ ಅವರ ಅಂತಿಮ ಪ್ರಯಾಣದಲ್ಲಿಯೂ ಮಕ್ಕಳ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಸಾಬೀತು  ಮಾಡಿ ತೆರಳಿದ್ದಾರೆ.

ತುಮಕೂರು[ಜ.21]  ಸ್ವಾಮೀಜಿಗಳ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಮಠದ ಪ್ರಕಟಣೆ ತಿಳಿಸಿರುವಂತೆ ಸ್ವಾಮೀಜಿ ಸೋಮವಾರ ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ಆದರೆ ಘೋಷಣೆಯನ್ನು 1.56ಕ್ಕೆ ಮಾಡಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದಕ್ಕೂ ಕಾರಣ ಇದೆ. ವಿದ್ಯಾರ್ಥಿಗಳು ಅನ್ನವನ್ನು ಸ್ವೀಕರಿಸಿದ ನಂತರವೇ ತನ್ನ ನಿಧನದ ಸುದ್ದಿ ಪ್ರಕಟ ಮಾಡಿ ಎಂದು ಸ್ವಾಮೀಜಿ ಒಮ್ಮೆ ಹೇಳಿಕೊಂಡಿದ್ದರಂತೆ. ಅದರಂತೆ ಮಕ್ಕಳು ಆಹಾರ ಸ್ವೀಕರಿಸಿದ ಮೇಲೆ ಸುದ್ದಿ ಪ್ರಕಟ ಮಾಡಲಾಯಿತು.

ನಡೆದಾಡುವ ದೇವರು ಬಿಟ್ಟು ಹೋದ ದಾರಿ

ಅಪಾರ ಭಕ್ತಗಣವನ್ನು ಬಿಟ್ಟು ನಡೆದಾಡುವ ದೇವರು ನಡೆದಿದ್ದಾರೆ. ಆದರೆ ಅವರು ಬಿಟ್ಟು ಹೋದ ನಂಬಿಕೆ, ಶ್ರದ್ಧೆ, ವಿಶ್ವಾಸ ಎಂದೆಂದಿಗೂ ಶಾಶ್ವತವಾಗಿರುತ್ತದೆ.

ತುಮಕೂರು: ಮಾರ್ಗ ಬದಲಾವಣೆ; ಯಾರು ಹೇಗೆ ಹೋಗ್ಬೇಕು? ಫುಲ್ ಡೀಟೆಲ್ಸ್...